ಶಿವಮೊಗ್ಗ ಕಮಲಾ ನೆಹರು ಮಹಿಳಾ ಕಾಲೇಜಿನಲ್ಲಿ ಆಜಾದಿ ಕಾ ಅಮೃತ ಮೋತ್ಸವದ ಅಂಗವಾಗಿ  ರಾಷ್ಟ್ರೀಯ ಸೇವಾ ಯೋಜನೆಯ 2021-22ನೇ ಸಾಲಿನ ಕಾರ್ಯಚಟುವಟಿಕೆಗಳ ನ್ನು ಉದ್ಘಾಟಿಸಿ ಪಿಇಎಸ್ ಇನಸ್ಟಿಟ್ಯೂಟ್ ಆಫ್ ಮ್ಯಾನೆಜ್ ಮೆಂಟ್ ಸ್ಟಡೀಸ್ ನ ಪ್ರಾಂಶುಪಾಲರಾದ ಡಾ.ಸಾಯಿಲತಾ ಕೆ.ಮಾತನಾಡಿದರು. ಕಾಲೇಜಿನ  ಪ್ರಾಂಶುಪಾಲರಾದ ಡಾ.ಎಚ್.ಎಸ್.ನಾಗಭೂಷಣ ಅಧ್ಯಕ್ಷತೆ ವಹಿಸಿದ್ದರು. ಕುವೆಂಪು ವಿವಿ  ಎನ್.ಎಸ್.ಎಸ್.ನ ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ.ನಾಗರಾಜ ಪರಿಸರ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

ಕಾರ್ಯಕ್ರಮಾಧಿಕಾರಿಗಳಾದ ಡಾ.ಬಾಲಕೃಷ್ಣ ಹೆಗಡೆ, ದೀಪಿಕಾ ವಿ. ಐಕ್ಯೂಎಸಿ ಸಂಯೋಜಕ ಡಾ.ಓಂಕಾರಪ್ಪ ಉಪಸ್ಥಿತರಿದ್ದರು. ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಸ್ವಚ್ಛತಾ ಜಾಗೃತಿ ಆಂದೋಲನದಲ್ಲಿ ಪಾಲ್ಗೊಂಡ ಸ್ವಯಂಸೇವಕಿಯರಿಗೆ ಪ್ರಮಾಣಪತ್ರ ವಿತರಿಸಲಾಯಿತು. ಹಿರಿಯ ಸ್ವಯಂಸೇವಕಿಯರಾದ ಕು.ಇಂದು ಎಸ್. ನಯನಾ ಕೆ.ಎಸ್. ಪಾರ್ವತಿ ಎ. ನಾಗವೇಣಿ ಎನ್. ಸತ್ಯವತಿ ಬಿ. ದೀಪ್ತಿ ಯು. ಕಾರ್ಯಕ್ರಮ ನಿರ್ವಹಿಸಿದರು.

ವರದಿ ಮಂಜುನಾಥ್ ಶೆಟ್ಟಿ…