ಸಾಗರ ನ್ಯೂಸ್…

ಸಾಗರ ಶಾಸಕರಾದ ಹರತಾಳು ಹಾಲಪ್ಪ ನವರು KPC ವ್ಯಾಪ್ತಿಯ ಪ್ರದೇಶಗಳಲ್ಲಿ ವಾಸಿಸುವ ಸಾರ್ವಜನಿಕರು ಕುಡಿಯುವ ನೀರಿಗಾಗಿ ಹಿನ್ನೀರಿನಲ್ಲಿ ಅಳವಡಿಸಿಕೊಂಡಿರುವ ಪಂಪ್ ಸೆಟ್ ಗಳನ್ನು ತೆರವು ಗೊಳಿಸಿ, ರೈತರಿಗೆ ಕೃಷಿ ಮಾಡಲು ಹಾಗೂ KPC ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಸ್ಥಳೀಯರಿಗೆ ಚಿಕಿತ್ಸೆ ನೀಡದೆ ವಿನಾಕಾರಣ ತೊಂದರೆ ಕೊಡುತ್ತಿರುವ KPC ಅಧಿಕಾರಿಗಳ ದೌರ್ಜನ್ಯ ಖಂಡಿಸಿ ಪ್ರತಿಭಟನೆ ಮಾಡಿದರು.

ನಂತರ ಸದರಿ ವಿಷಯಗಳ ಬಗ್ಗೆ ಇಂಧನ ಸಚಿವರಾದ ಸುನೀಲ್ ಕುಮಾರ್ ರವರೊಂದಿಗೆ ಫೋನ್ ಕರೆ ಮೂಲಕ ಮಾತನಾಡಿ ಅಧಿಕಾರಿಗಳು ಸಾರ್ವಜನಿಕರಿಗೆ ನೀಡುತ್ತಿರುವ ಕಿರುಕುಳದ ಬಗ್ಗೆ ಮನವರಿಕೆ ಮಾಡಿದರು.

ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು, ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಸ್ಥಳೀಯರಿಗೆ ಇನ್ನು ಮುಂದೆ ಯಾವುದೇ ರೀತಿಯ ತೊಂದರೆ ನೀಡುವುದಿಲ್ಲವೆಂಬ ಆಶ್ವಾಸನೆ ಕೊಟ್ಟ ಬಳಿಕ ಶಾಸಕರು ಪ್ರತಿಭಟನೆ ಮೊಟಕುಗೊಳಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷರಾದ ಟಿ.ಡಿ ಮೇಘರಾಜ್, ಪ.ಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ಪಕ್ಷದ ಮುಖಂಡರು, ಸಾರ್ವಜನಿಕರು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…