ವೈದ್ಯರು ಮತ್ತು ನರ್ಸ್‍ಗಳ ನಂತರ ಫ್ರಂಟ್‍ಲೈನ್ ಕೊರೋನಾ ವಾರಿಯರ್ಸ್‍ಗಳಾಗಿರುವ ಪೊಲೀಸರು ಹಗಲಿರುಳು ಪ್ರಾಣದ ಹಂಗು ತೊರೆದು ಕರ್ತವ್ಯ ನಿರ್ವಹಿಸುತ್ತಿದ್ದು, ಇಂತಹವರ ಕೆಲಸವನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಹೇಳಿದರು. ಪೊಲೀಸರು ಹಗಲು ರಾತ್ರಿ ಜನಸೇವೆಗಾಗಿ ಕೆಲಸ ಮಾಡುತ್ತಿದ್ದಾರೆ. ಅವರ ಸುರಕ್ಷತೆಯೂ ಅಷ್ಟೇ ಮುಖ್ಯ ಈ ನಿಟ್ಟಿನಲ್ಲಿ ಯುವ ಕಾಂಗ್ರೆಸ್ ವತಿಯಿಂದ ಪೊಲೀಸರಿಗೆ ಅಗತ್ಯ ವಸ್ತುಗಳಾದ ಮಾಸ್ಕ್, ಸ್ಯಾನಿಟೈಸರ್, ಆಕ್ಸಿಮೀಟರ್, ಆಕ್ಸಿಜೆನ್ ಕಾನ್ಸಂಟ್ರೇಟರ್, ಫೇಸ್‍ಶೀಲ್ಡ್‍ಗಳನ್ನು ವಿತರಿಸಿದರು.

ಈ ಸಂದರ್ಭದಲ್ಲಿ ರಾಷ್ಟ್ರ ಯುವ ಕಾಂಗ್ರೆಸ್ ಅಧ್ಯಕ್ಷರಾದ ಬಿ .ವಿ.ಶ್ರೀನಿವಾಸ್ , ಮಾಜಿ ಶಾಸಕರಾದ ಕೆ .ಬಿ ಪ್ರಸನ್ನಕುಮಾರ್ , ವಿಧಾನ ಪರಿಷತ್ ಸದಸ್ಯರಾದ ಆರ್ .ಪ್ರಸನ್ನಕುಮಾರ್ , ಎನ್ .ರಮೇಶ್ , ಹೆಚ್ .ಸಿ .ಯೋಗೇಶ್ , ವಿಜಯ್ ಕುಮಾರ್ , ಚೇತನ್ ,ಮದು, ಪಲ್ಲವಿ ಇತರರು ಉಪಸ್ಥಿತರಿದ್ದರು

ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ