ಪ್ರತಿಷ್ಠಿತ ಪದ್ಮಶ್ರೀ ಪುರಸ್ಕೃತ ಹೆಚ್ ಆರ್ ಕೇಶವಮೂರ್ತಿ ಅವರನ್ನು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು ಹಾಗೂ ಶಿವಮೊಗ್ಗ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ ಅವರು ಸನ್ಮಾನಿಸಿ, ಗೌರವಿಸಿದರು.

ಶಿವಮೊಗ್ಗದ ಹೊಸಹಳ್ಳಿಯಲ್ಲಿರುವ ಕೇಶವಮೂರ್ತಿ ಅವರ ನಿವಾಸಕ್ಕೆ ಖುದ್ದು ಭೇಟಿ ನೀಡಿ ಪದ್ಮಶ್ರೀ ಪ್ರಶಸ್ತಿ ಲಭಿಸಿದ್ದಕ್ಕೆ ಗೌರವಿಸಿ, ಅಭಿನಂದನೆ ಸಲ್ಲಿಸಿದರು.

ಈ ವೇಳೆ ಗಮಕ ಗಂಧರ್ವ ಎಂಬ ಹೆಸರು ಪಡೆದಿರುವ ಕೇಶವಮೂರ್ತಿ ಅವರು, ಇಳಿವಯಸ್ಸಿನಲ್ಲೂ ಗಮಕ ರಾಗ ಹಾಡುವ ಮೂಲಕ ಗಮನಸೆಳೆದರು.

ಸಂಸದರಾದ ಬಿ ವೈ ರಾಘವೇಂದ್ರ, ವಿಧಾನ ಪರಿಷತ್ ಸದಸ್ಯರಾದ ರುದ್ರೇಗೌಡ, ಡಿಎಸ್ ಅರುಣ್, ಮಾಜಿ ಎಂಎಲ್‌ಸಿ ಭಾನುಪ್ರಕಾಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…