ಅಲ್ಲಾಪೂರ ಗ್ರಾಮದ ಕುಡಿಯುವ ನೀರಿನ ಕೆರೆ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡಲು ಬೆಂಗಳೂರು ವಿಧಾನ ಸೌಧದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.

ಅದಕ್ಕೆ ತಕ್ಷಣವೇ ಸ್ಪಂದಿಸಿದ ಕರ್ನಾಟಕ ಸರ್ಕಾರದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವರಾದ ಸನ್ಮಾನ್ಯ ಶ್ರೀ ಕೆ .ಎಸ್. ಈಶ್ವರಪ್ಪನವರು ಕುಂದಗೋಳ ತಾಲೂಕಿನ ಅಲ್ಲಾಪೂರ ಗ್ರಾಮದಲ್ಲಿ ಕುಡಿಯುವ ನೀರಿನ ಕೆರೆ ಅಭಿವೃದ್ಧಿ ಪಡಿಸಲು ಅನುದಾನ ಬಿಡುಗಡೆ ಮಾಡಲು ಮನವಿಗೆ ತಕ್ಷಣವೇ ಸಹಿ ಮಾಡಿ ಸಂಬಂಧ ಪಟ್ಟ ಧಾರವಾಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅವರಿಗೆ ಪತ್ರ ಮೂಲಕ ಆದಷ್ಟು ಬೇಗನೆ ಕೆರೆ ಅಭಿವೃದ್ಧಿ ಕಾಮಗಾರಿಯನ್ನು ಮಾಡಲು ಸೂಕ್ತ ಕ್ರಮ ಕೈಗೊಳ್ಳುವಂತೆ ಪ್ರತರದ ಮೂಲಕ ಸೂಚನೆ ನೀಡಿದರು.

ಅಲ್ಲಾಪೂರ ಗ್ರಾಮದ ಕುಡಿಯುವ ನೀರಿನ ಕೆರೆ ಅಭಿವೃದ್ಧಿ ಪಡಿಸಲು ಬೆಂಗಳೂರಿಗೆ ವಿಧಾನ ಸೌಧ ಭೇಟಿ ಮಾಡಿ ಗ್ರಾಮದ ಹಲವಾರು ಅಭಿವೃದ್ಧಿ ಕಾರ್ಯಗಳು ಕುರಿತು ಮನವಿ ಮಾಡಿದೆ ತಕ್ಷಣವೇ ಮನವಿ ಯಲ್ಲಿ ಕುಡಿಯುವ ನೀರಿನ ಕೆರೆ ಅಭಿವೃದ್ಧಿ ಬಗ್ಗೆ ಚರ್ಚಿಸಿ ತಕ್ಷಣ ಸ್ಪಂದಿಸಿ ನನ್ನ ಮನವಿ ಸಹಿ ಮಾಡಿ ಸಂಬಂಧ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನನ್ನ ಮನವಿಗೆ ಸ್ಪಂದಿಸಿದ ಕರ್ನಾಟಕ ಸರ್ಕಾರದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವರಾದ ಸನ್ಮಾನ್ಯ ಶ್ರೀ ಕೆ .ಎಸ್. ಈಶ್ವರಪ್ಪನವರಿಗೆ ಗ್ರಾಮದ ಮತ್ತು ನನ್ನ ಪರವಾಗಿ ತುಂಬಾ ಧನ್ಯವಾದಗಳು.

ವರದಿ ಮಂಜುನಾಥ್ ಶೆಟ್ಟಿ…