ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನಾ ಸಂಸ್ಥೆ ವತಿಯಿಂದ ನೂತನ ಸಾಮಾನ್ಯ ಸೇವಾ ಕೇಂದ್ರವನ್ನು ದೀಪ ಬೆಳಗುವ ಮೂಲಕ ಪಾಲಿಕೆ ಸದಸ್ಯೆ ರೇಖಾ ರಂಗನಾಥ್ ಉದ್ಘಾಟನೆ ಮಾಡಿದರು.

ನಂತರ ಮಾತನಾಡಿದ ರೇಖಾ ರಂಗನಾಥ್ ರವರು ಧರ್ಮಸ್ಥಳ ಸಂಸ್ಥೆಯು ಪೂಜ್ಯ ಶ್ರೀ ಡಾಕ್ಟರ್ ವೀರೇಂದ್ರ ಹೆಗ್ಗಡೆ ಯವರ ಮಾರ್ಗದರ್ಶನದಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಎಲ್ಲಾ ಬಾಂಧವರು ಉತ್ತಮ ಕಾರ್ಯಕ್ರಮಗಳನ್ನು ನೀಡುವುದರ ಮೂಲಕ ಸಾಮಾಜಿಕ ಸೇವೆಯಲ್ಲಿ ತೊಡಗಿಕೊಂಡಿದ್ದಾರೆ. ಸರ್ಕಾರದ ಕೊಂಡಿಯಾಗಿ ಸಂಸ್ಥೆಯು ಜನಪರವಾಗಿ ಸೇವೆ ಸಲ್ಲಿಸುತ್ತಿದೆ ನಮ್ಮ ಬಡಾವಣೆಯ ನಾಗರಿಕರು ಈ ಸೇವಾಕೇಂದ್ರದ ಸದುಪಯೋಗಪಡಿಸಿಕೊಳ್ಳಬೇಕೆಂದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ರಾದ ಶ್ರೀಮತಿ ಗೀತಾ , ತಾಲೂಕು ಯೋಜನಾಧಿಕಾರಿ ಶ್ರೀಮತಿ ರೂಪಾಆದರ್ಶ, ವಲಯದ ಮೇಲ್ವಿಚಾರಕರು ಪ್ರಶಾಂತ್ ಹಾಗೂ ಸೇವಾ ಪ್ರತಿನಿಧಿಗ ಗಳು ಒಕ್ಕೂಟದ ಪದಾಧಿಕಾರಿಗಳು, ಸಂಘದ ಸದಸ್ಯರು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…