ಶಿವಮೊಗ್ಗ ನಗರದಲ್ಲಿ ಇಂದು ಪೆಟ್ರೋಲ್ ಬೆಲೆ ನೂರರ ಗಡಿ ದಾಟಿದ್ದರಿಂದ ಶಿವಮೊಗ್ಗ ಯೂತ್ ಕಾಂಗ್ರೆಸ್ ವತಿಯಿಂದ ನಗರದ ಕುವೆಂಪು ರಸ್ತೆಯಲ್ಲಿರುವ ಪೆಟ್ರೋಲ್ ಬಂಕ್ ನಲ್ಲಿ ಜಾಗಟೆ ಬಾರಿಸುವ ಮೂಲಕ ವಿಶೇಷವಾಗಿ ಪ್ರತಿಭಟಿಸಿದರು.

ಜನಸಾಮಾನ್ಯರು ಕೋವಿಡ್ ನಿಂದಾಗಿ ಕಷ್ಟ ಅನುಭವಿಸುತ್ತಿದ್ದಾರೆ ಈ ಸಮಯದಲ್ಲಿ ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ವಿಪರೀತವಾಗಿ ಏರಿಸಿದೆ ಇದು ಕೇಂದ್ರ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿ ಎಂದು ಯೂತ್ ಕಾಂಗ್ರೆಸ್ ನ ಅಧ್ಯಕ್ಷರಾದ ಗಿರೀಶ್ ರವರು ಹೇಳಿದರು. ಈ ಸಂದರ್ಭದಲ್ಲಿ ಎಚ್ ಸಿ ಯೋಗೇಶ್ ರಂಗನಾಥ್ ನಿಖಿಲ್ ಲೋಕೇಶ್ ಮುಂತಾದವರು ಉಪಸ್ಥಿತರಿದ್ದರು.


ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ

ಶಿವಮೊಗ್ಗದ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153