ನರೇಂದ್ರ ಮೋದಿಯವರ ಸರ್ಕಾರ COVID ಸಂಕಷ್ಟದ ನಡುವೆಯೂ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಸುವ ಮೂಲಕ ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಿದೆ ಅಚ್ಛೇ ದಿನಗಳ ಭರವಸೆ ನೀಡಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ದಿನೇ ದಿನೇ ಅಗತ್ಯ ವಸ್ತುಗಳನ್ನು ಏರಿಸುವ ಮೂಲಕ ತನ್ನ ಇಬ್ಬಗೆಯ ನೀತಿ ಅನುಸರಿಸುತ್ತಿದೆ .ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ತೈಲ ಬೆಲೆ ಇಳಿಕೆ ಆಗಲಿದೆ ಎಂದೇ ಎಲ್ಲರ ಭಾವನೆಯಾಗಿತ್ತು .

ಇದನ್ನು ನಂಬಿ ಅನೇಕರು ಬಿಜೆಪಿಯನ್ನು ಬೆಂಬಲಿಸಿದರು ಆದರೆ ಈಗ ಬಿಜೆಪಿ ಸರ್ಕಾರ ಜನರಿಗೆ ನಂಬಿಕೆಯನ್ನು ಹುಸಿ ಮಾಡಿ ತೈಲ ಬೆಲೆ ನಿರಂತರವಾಗಿ ಏರಿಕೆ ಮಾಡುವ ಮೂಲಕ ಜನರಿಗೆ ಜನರನ್ನು ಸಂಕಷ್ಟಕ್ಕೆ ದೂಡಿದೆ .ಯುಪಿಎ ಸರ್ಕಾರ ಇದ್ದಾಗ ಪ್ರತಿ ಲೀಟರ್ ಪೆಟ್ರೋಲ್ ಗೆ 75ಹಾಗೂ ಡೀಸೆಲ್ ಬೆಲೆ 64 ರ ಆಸುಪಾಸಿನಲ್ಲಿತ್ತು .ಆದರೆ ಎನ್ ಡಿಎ ಸರ್ಕಾರ ಬಂದ ನಂತರ ಪೆಟ್ರೋಲ್ ಬೆಲೆ ನೂರರ ಗಡಿ ದಾಟಿದೆ .ಡೀಸೆಲ್ ಬೆಲೆ ಶತಕದ ಅಂಚಿನಲ್ಲಿದ್ದ .ಮೊದಲೇ COVID ಲಾಕ್ ಡೌನ್ ಸುಳಿಗೆ ಸಿಲುಕಿ ದೈನಂದಿನ ಜೀವನ ನಡೆಸುವುದೇ ಕಷ್ಟಕರವಾಗಿರುವಾಗ ತೈಲ ಬೆಲೆ ಏರಿಕೆಯಿಂದ ಜನರು ದಿಕ್ಕು ತೋಚದಂತಾಗಿದೆ .

ತೈಲ ಬೆಲೆ ಏರಿಕೆಯಿಂದಾಗಿ ಹೂಡಿದ ಅಗತ್ಯ ವಸ್ತುಗಳ ಬೆಲೆಯೂ ಗಗನಕ್ಕೇರಿದೆ .ಸರ್ಕಾರ ಸುಳ್ಳು ಆಶ್ವಾಸನೆಗಳನ್ನು ನೀಡಿ ಬಡವರು ಮಧ್ಯಮ ವರ್ಗದವರು ಜೀವಿಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣ ಮಾಡಿರುವುದು ಖಂಡನೀಯವಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಚೇತನ್ .k, ಮಹಾನಗರ ಪಾಲಿಕೆ ಸದಸ್ಯರಾದ ರಮೇಶ್ ಹೆಗ್ಡೆ , ಜಿಲ್ಲಾ ಕಾಂಗ್ರೆಸ್ ಮುಖಂಡರಾದ ತಾರನಾಥ್ , ಯುವ ಮುಖಂಡ ಮಧುಸೂದನ್ ,ದಕ್ಷಿಣ ಬ್ಲಾಕ್ ಅಧ್ಯಕ್ಷ ವಿನಯ್ ,ಉತ್ತರ ಬ್ಲಾಕ್ ಉಪಾಧ್ಯಕ್ಷ ಗಿರೀಶ್ ,ಶಿಕಾರಿಪುರ ಯುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕ್ ನಾಯ್ಕ್ , NSUI ನ ಬಾಲಾಜಿ ,ರವಿ ,ವಿಜಯ್ ,ಮಂಜು, ಚಂದ್ರೋಜಿ ರಾವ್, ಸಂದೀಪ,ಅಬ್ದುಲ್ಲ ಹಾಗೂ ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ

ಶಿವಮೊಗ್ಗದ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153