ಶಿವಮೊಗ್ಗ: ನಕಲಿ ದಾಖಲೆ ನೀಡಿ ಬ್ಯಾಂಕ್ ಗೆ ವಂಚಿಸಿದ ಮೂವರ ವಿರುದ್ಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚೇತನ್ ರಾಥೋಡ್ ,ಅರುಣ್ ಕುಮಾರ್, ಅಶೋಕ್ ಎಂಬುವರ ವಿರುದ್ಧ ಕೇಸು ದಾಖಲಿಸಲಾಗಿದೆ.

ಇವರು ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಮನೆ ಆಸ್ತಿ ಖಾತೆ ನಕಲಿ ದಾಖಲೆ ಸೃಷ್ಟಿಸಿ ಆಧಾರ್ ಕಾರ್ಡ್ ಸೇರಿ ದಾಖಲೆಗಳನ್ನು ಸಲ್ಲಿಸಿ ದುರ್ಗಿಗುಡಿಯ ಇಂಡಸ್ ಇಂಡ್ ಬ್ಯಾಂಕಿನಿಂದ 17 ಲಕ್ಷ ರೂಪಾಯಿ ಸಾಲ ಪಡೆದುಕೊಂಡಿದ್ದಾರೆ.

ಈ ಕುರಿತಾಗಿ ಬ್ಯಾಂಕಿನ ವ್ಯವಸ್ಥಾಪಕರು ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ವರದಿ ಮಂಜುನಾಥ್ ಶೆಟ್ಟಿ…