ಶಿವಮೊಗ್ಗ ನಗರದ ರಾಜೀವ್ ಗಾಂಧಿ ಬಡಾವಣೆ ಎಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಅಂಗನವಾಡಿ ಕಟ್ಟಡವನ್ನು ಮಹಾನಗರ ಪಾಲಿಕೆಯ ವಿರೋಧ ಪಕ್ಷ ನಾಯಕಿ ಶ್ರೀಮತಿ ಯಮುನಾ ರಂಗೇಗೌಡ ರವರು ಉದ್ಘಾಟಿಸಿದರು.

ಹಲವಾರು ವರ್ಷಗಳಿಂದ ಅಂಗನವಾಡಿ ಕಟ್ಟಡದ ಕೊರತೆಯಿತ್ತು. ರಾಜೀವ್ ಗಾಂಧಿ ಬಡಾವಣೆಯ ಅತ್ಯಂತ ಹಳೆಯ ಸಮುದಾಯ ಭವನದಲ್ಲಿ ಅಂಗನವಾಡಿಗೆ ಬರುವಂತಹ ಮಕ್ಕಳಿಗೆ ಶಿಕ್ಷಣ ನೀಡಲಾಗುತ್ತಿದ್ದು ಮೂರು ವರ್ಷಗಳ ಸತತ ಪ್ರಯತ್ನಗಳ ನಂತರ ಈ ಪ್ರದೇಶದಲ್ಲಿ ಸುಸಜ್ಜಿತವಾದ ಎಲ್ಲಾ ವ್ಯವಸ್ಥೆಗಳನ್ನು ಹೊಂದಿರುವ ಅಂಗನವಾಡಿ ಕಟ್ಟಡವನ್ನು ಉದ್ಘಾಟನೆ ಮಾಡಲಾಗಿದೆ.

ಈ ಮೂಲಕ ಇಲ್ಲಿನ ಮಕ್ಕಳಿಗೆ ಉತ್ತಮ ವ್ಯವಸ್ಥೆಯನ್ನು ನೀಡಲಾಗುತ್ತದೆ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕರು ಹಾಗೂ ಈ ವಾರ್ಡಿನ ಕಾರ್ಪೊರೇಟರ್ ಶ್ರೀಮತಿ ಯಮುನಾ ರಂಗೇಗೌಡ ಮುಖಂಡರಾದ ರಂಗೇಗೌಡರು ಅಂಗನವಾಡಿ ಮೇಲ್ವಿಚಾರಕಿ ನಾಗರತ್ನ ಶಿಕ್ಷಕರು ಸಹಾಯಕಿಯರು ಸ್ಥಳೀಯರಾದ ಹನಿಫ್ ಭಾಷಾ ಪರಶುರಾಮ್ ಇನ್ನಿತರರು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…