ಶಿವಮೊಗ್ಗ ನಗರದಲ್ಲಿ ಇವತ್ತು ರಾತ್ರಿಯಿಂದ ದಿನಾಂಕ 23 ರ ಬೆಳಗ್ಗೆ ತನಕ ಕರ್ಫ್ಯೂ ವಿಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ.

ನಿನ್ನೆ ನಡೆದ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಹಿನ್ನೆಲೆ ಮುಂಜಾಗ್ರತೆಯಾಗಿ ಅಹಿತಕರ ಘಟನೆ ನಡೆಯದಂತೆ ನಗರದಲ್ಲಿ ಕರ್ಫ್ಯೂ ವಿಧಿಸಲಾಗಿದೆ. ಅನಗತ್ಯವಾಗಿ ಓಡಾಡಿದರೆ ಎಫ್ಐಆರ್ ದಾಖಲು ಮಾಡುವುದು ಎಂದು ಹೇಳಿದ್ದಾರೆ.

ವರದಿ ಮಂಜುನಾಥ್ ಶೆಟ್ಟಿ…