ಬಾರ್ಕೂರು ಮಹಾಸಂಸ್ಥಾನದ ಪೀಠಾಧಿಪತಿಗಳಾದ ಡಾ. ವಿಶ್ವ ಸಂತೋಷ ಭಾರತಿ ಶ್ರೀಪಾದರು ಬಜರಂಗದಳ ಕಾರ್ಯಕರ್ತರ ಮನೆಗೆ ಭೇಟಿ ನೀಡಿ ನಮ್ಮ ಸಹಕಾರ ನಿಮಗಿರುತ್ತದೆ ಎಂದು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು ಕೊಲೆಗಡುಕರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿದರು. ಬಿಜೆಪಿಯ ಎಲ್ಲಾ ಶಾಸಕರು ಹಾಗೂ ಸಚಿವರು ಹರ್ಷನ ಕುಟುಂಬಕ್ಕೆ ತಲಾ ಒಂದು ಲಕ್ಷ ರೂಪಾಯಿಗಳು ಅವರ ಬ್ಯಾಂಕಿನ ಖಾತೆಗೆ ಜಮಾ ಮಾಡುವ ಮೂಲಕ ಕುಟುಂಬಕ್ಕೆ ಸಹಕಾರ ನೀಡಬೇಕು.

ವರದಿ ಮಂಜುನಾಥ್ ಶೆಟ್ಟಿ…