ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್ಎಸ್ ಸುಂದರೇಶ್ ರವರು ಬಜರಂಗದಳ ಕಾರ್ಯಕರ್ತ ಹರ್ಷನ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.ಮೃತಪಟ್ಟ ಹರ್ಷನ ಕುಟುಂಬಕ್ಕೆ ಸರ್ಕಾರ 1 ಕೋಟಿ ಪರಿಹಾರವನ್ನು ಘೋಷಣೆ ಮಾಡಬೇಕು ಎಂದು ಆಗ್ರಹಿಸಿದರು.

ಮೃತಪಟ್ಟವರ ಕುಟುಂಬಕ್ಕೆ ದೇವರು ದುಃಖ ಬಾರಿಸುವ ಶಕ್ತಿ ಕೊಡಲಿ , ಕೃತ್ಯ ಎಸಗಿದ ದುಷ್ಕರ್ಮಿಗಳ ಮೇಲೆ ಕಠಿಣ ಕ್ರಮ ಜರುಗಿಸಬೇಕು ಹಾಗು ಗಲಾಟೆ ದೊಂಬಿಯಿಂದ ನಷ್ಟವಾದ ಸಾರ್ವಜನಿಕ ಆಸ್ತಿಪಾಸ್ತಿ ನಷ್ಟಕ್ಕೆ ಪರಿಹಾರ ಕೊಡಬೇಕೆಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ಅವರು ಸರ್ಕಾರಕ್ಕೆ ಒತ್ತಾಯ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಆರ್ ಪ್ರಸನ್ನ ಕುಮಾರ್ ಮಂಜುನಾಥ್ ಗೌಡ ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…