ಕರವೇ ಯುವ ಸೇನೆ ಮತ್ತು ಆನಂದಣ್ಣ ಎಂಗ್ ಬ್ರಿಗೇಡ್ ಟ್ರಸ್ಟ್ ಹಾಗೂ ಶಿವಮೊಗ್ಗ ಜಿಲ್ಲಾ ಆಟೋ ಚಾಲಕರ ಸಂಘಟನೆಗಳ ಒಕ್ಕೂಟ ವತಿಯಿಂದ ಕೆಲವು ವರ್ಷಗಳ ಹಿಂದೆ ಹತ್ಯೆಯಾದ ಬಜರಂಗದಳ ಕಾರ್ಯಕರ್ತ ವಿಶ್ವನಾಥ್ ಶೆಟ್ಟಿ ಮನೆಗೆ ಭೇಟಿ ನೀಡಿದರು.

ಈ ಮೂರು ಸಂಘಟನೆಯಿಂದ ವಿಶ್ವನಾಥ ಶೆಟ್ಟಿ ಮನೆಗೆ ಬೇಕಾಗುವ ದಿನಸಿ ಪದಾರ್ಥಗಳು ,ಅಗತ್ಯ ವಸ್ತುಗಳು ಹಾಗೂ ಗ್ಯಾಸ್ ಸಿಲಿಂಡರ್ ಸ್ಟವ್ ಇತ್ಯಾದಿ ವಸ್ತುಗಳನ್ನು ನೀಡಲಾಯಿತು.ಈ ಸಂದರ್ಭದಲ್ಲಿ ಆನಂದಣ್ಣ ಎಂಗ್ ಬ್ರಿಗೇಡ್ ನ ಹಾಗೂ ಕರವೇ ಯುವ ಸೇನೆ ಜಿಲ್ಲಾಧ್ಯಕ್ಷ ಕಿರಣ್ ಕುಮಾರ್ ಎಚ್ ಎಸ್ ಹಾಗೂ ಜಿಲ್ಲಾ ಖಜಾಂಚಿ ಗಣೇಶ್ ಮಹಿಳಾ ಘಟಕದ ನಗರಾಧ್ಯಕ್ಷ ಕವಿತಾ ಹಾಗೂ 26ನೇ ವಾರ್ಡ್ ಅಧ್ಯಕ್ಷ ವಿಕಾಸ್ ಗುರುಮೂರ್ತಿ ರವಿ ಪರಶುರಾಮ್ ಶಿವಮೊಗ್ಗ ಜಿಲ್ಲಾ ಆಟೋ ಚಾಲಕರ ಒಕ್ಕೂಟದ ಅಧ್ಯಕ್ಷರಾದ ಶಿವಕುಮಾರ್ ಎಸ್ ಬಿ ಮುಂತಾದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…