ಶಿವಮೊಗ್ಗ: ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಜನ್ಮದಿನದ ಶುಭಾಶಯಗಳನ್ನು ಕೋರಲಾಯಿತು.

ಕರ್ನಾಟಕವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸಿದ ಜನಪರ ಕಾಳಜಿಯ ನಾಯಕ ಬಿ.ಎಸ್.ಯಡಿಯೂರಪ್ಪ ರಾಜ್ಯದ ಜನರ ಎಲ್ಲರ ಅಚ್ಚುಮೆಚ್ಚಿನ ನಾಯಕರಾಗಿದ್ದಾರೆ. ಮುಂದಿನ ದಿನಗಳಲ್ಲಿಯೂ ರಾಜ್ಯದ ಅಭಿವೃದ್ಧಿಗೆ ನಿರಂತರ ಕೊಡುಗೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್, ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್, ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ನಿರ್ದೇಶಕ ಎಂ.ರಾಜು, ಸಹಕಾರ್ಯದರ್ಶಿ ಜಿ.ವಿಜಯ್‌ಕುಮಾರ್, ಪರಮೇಶ್ವರ್ ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…