ಮಹಾಶಿವರಾತ್ರಿ ಪ್ರಯುಕ್ತ ಶಿವಮೊಗ್ಗ ನಗರದ ವಿನೋಬನಗರ ಶಿವಾಲಯದ ಮುಂಭಾಗ ಪ್ರತಿವರ್ಷದಂತೆ ಈ ವರ್ಷವೂ ಶ್ರೀ ಬಾಲಗಂಗಾಧರ ತಿಲಕ್ ಯುವ ಪಡೆ ಹಾಗೂ ಸಿಹಿಮೊಗೆ ಕನ್ನಡ ಯುವ ವೇದಿಕೆ ವಿನೋಬನಗರ ಇವರ ಆಶ್ರಯದಲ್ಲಿ ಶಿವಾಲಯಕ್ಕೆ ಆಗಮಿಸುವ ಭಕ್ತಾದಿಗಳಿಗೆ ಭಕ್ತಾದಿಗಳಿಗೆ ಮಜ್ಜಿಗೆಯನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀ ಬಾಲಗಂಗಾಧರ ತಿಲಕ್ ಯುವ ವೇದಿಕೆಯ ಅಧ್ಯಕ್ಷರಾದ ಸಂದೀಪ್ ಸುಂದರ್ ರಾಜ್, ಬಡಾವಣೆಯ ಯುವ ಮುಖಂಡರುಗಳಾದ ಹೆಚ್.ಪಿ. ಗಿರೀಶ್ , ಗುರುಪ್ರಸಾದ್, ಯಶ್ವಂತ್, ಪ್ರತೀಕ್ ಕೆಪಿ, ಗಿರೀಶ್ ಶೆಟ್ಟಿ, ದರ್ಶನ್ ,ಅಭಿಷೇಕ್ ಗೌಡ, ಮನೋಜ್ ವಿಘ್ನೇಶ್ ಲೋಹಿತ್, ಆಕರ್ಷ್, ದೇವರಾಜ್, ಯಶ್ವಂತ್, ವಿಕಾಸ್ ಹಾಗೂ ವೇದಿಕೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…