ರಷ್ಯಾ – ಉಕ್ರೇನ್ ಯುದ್ಧದ ನಡುವೆ ಶಿವಮೊಗ್ಗ ನಗರಕ್ಕೆ ಬಂದು ತಲುಪಿದ ವಿದ್ಯಾರ್ಥಿನಿ ಯರಾದ ಕು||ಅನುಮಿತ, ಮತ್ತು ಕು||ಜಯಶೀಲಾ ಬಿನ್ ಪಾಪಣ್ಣ ಹನುಮಂತಯ್ಯ, ಅವರ ಮನೆಗೆ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಟಿ.ಡಿ ಮೇಘರಾಜ್ ಅವರು ಭೇಟಿ ನೀಡಿ ಸದ್ಯದ ಸ್ಥಿತಿಗತಿಗಳ ಬಗ್ಗೆ ಚರ್ಚಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಮೇಯರ್ ಶ್ರೀಮತಿ ಸುನೀತಾ ಅಣ್ಣಪ್ಪ, ನಗರ ಬಿಜೆಪಿ ಅಧ್ಯಕ್ಷರಾದ ಎನ್.ಕೆ ಜಗದೀಶ್, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾದ ಶಿವರಾಜ್, ಧರ್ಮಪ್ರಸಾದ್, ಪಾಲಿಕೆ ಸದಸ್ಯರಾದ ಸುವರ್ಣ ಶಂಕರ್ ಮತ್ತು ಮಾಜಿ ಪಾಲಿಕೆ ಸದಸ್ಯರಾದ ಶಿವಾಜಿ ರಾವ್, ನಗರ ಯುವಮೋರ್ಚಾ ಅಧ್ಯಕ್ಷರಾದ ಆರ್.ವಿ ದರ್ಶನ್ ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…