ಶಿವಮೊಗ್ಗ : ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ಎಂಬಿಎ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಹರ್ಷ.ಸಿ.ಮಠದ್ ಅವರು ಮಂಡಿಸಿದ ‘ಭಾರತೀಯ ಉಕ್ಕು ಉದ್ಯಮದ ಕಾರ್ಯಕ್ಷಮತೆಯ ಕುರಿತ ತೌಲನಿಕ ಅಧ್ಯಯನ’ ಪ್ರಬಂಧಕ್ಕೆ ಕುವೆಂಪು ವಿಶ್ವವಿದ್ಯಾಲಯ ಪಿ.ಹೆಚ್.ಡಿ ಪದವಿ ನೀಡಿದೆ.

ಕುವೆಂಪು ವಿ.ವಿಯ ಕಾಲೇಜು ಅಭಿವೃದ್ಧಿ ಮಂಡಳಿಯ ನಿವೃತ್ತ ನಿರ್ದೇಶಕ ಡಾ.ಗಣೇಶ್.ಬಿ ಮಾಗದರ್ಶನ ನೀಡಿದ್ದಾರೆ. ಇವರಿಗೆ ರಾಷ್ಟ್ರೀಯ ಶಿಕ್ಷಣ ಸಮಿತಿ ಎಲ್ಲಾ ಆಡಳಿತ ಮಂಡಳಿ ಸದಸ್ಯರು ಹಾಗೂ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.

ವರದಿ ಮಂಜುನಾಥ್ ಶೆಟ್ಟಿ…