ಸಹ್ಯಾದ್ರಿ ಕ್ಯಾಂಪಸ್ ಉಳಿಸಿ ಹೋರಾಟ ವೇದಿಕೆ ವತಿಯಿಂದ ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನ ಕ್ಯಾಂಪಸ್ ನ ಜಾಗವನ್ನು ವಿಶೇಷ ಕ್ರೀಡಾ ತರಬೇತಿ ಕೇಂದ್ರಕ್ಕೆ ಹಸ್ತಾಂತರಿಸುವುದನ್ನು ವಿರೋಧಿಸಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು .
ಶಿವಮೊಗ್ಗ ಜಿಲ್ಲೆಯಲ್ಲಿ ಕ್ರೀಡಾ ತರಬೇತಿ ಕೇಂದ್ರ ಸ್ಥಾಪಿಸುವುದಕ್ಕೆ ನಮ್ಮ ಬೆಂಬಲವಿದೆ ಆದರೆ ಸಹ್ಯಾದ್ರಿ ಕ್ಯಾಂಪಸ್ ಜಾಗದಲ್ಲಿ ಬೇಡ ಎಂದು ಸಹ್ಯಾದ್ರಿ ಹಳೆಯ ವಿದ್ಯಾರ್ಥಿ ಸಂಘ ಅಧ್ಯಕ್ಷರಾದ ಎಸ್ ಗುರುಮೂರ್ತಿ ಅವರು ಹೇಳಿದರು. ಈ ಸಂದರ್ಭದಲ್ಲಿ ಡಾಕ್ಟರ್ ಸಣ್ಣರಾಮ , ಕೆ ಪಿ ಶ್ರೀಪಾಲ್ , ಹೊನ್ನಾಳಿ ಚಂದ್ರಶೇಖರ್ , ಜೇಸುದಾಸ್ , ವಿಜಯ್ ಮತ್ತು ಲೋಹಿತ್ ಉಪಸ್ಥಿತರಿದ್ದರು.
ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ