ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಇಂದು ನಗರದ ವಿನೋಬನಗರದಲ್ಲಿ ಅಶ್ರಿತ ಫೌಂಡೇಶನ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಶಿವಮೊಗ್ಗ ನಗರದ ಮಾಜಿ ಶಾಸಕರಾದ ಸನ್ಮಾನ್ಯ ಕೆ ಬಿ ಪ್ರಸನ್ನ ಕುಮಾರ್ ರವರು ಭಾಗವಹಿಸಿದ್ದರು.

ವಿವಿಧ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆ ಮಾಡಿದ ಮಹಿಳಾ ಸಾಧಕಿಯರಿಗೆ ಸನ್ಮಾನ ಮಾಡುವ ಮೂಲಕ ಮಹಿಳಾ ದಿನಾಚರಣೆ ಆಚರಿಸಿದ್ದು ವಿಶೇಷವಾಗಿತ್ತು. ಇದರೊಂದಿಗೆ ಮಹಿಳೆಯರಿಗೆ ಸ್ವ ಉದ್ಯೋಗ ಕಲ್ಪಿಸುವ ಸಲುವಾಗಿ ಅರ್ಹ ಫಲನುಭವಿಗಳಿಗೆ ಉಚಿತ ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು.

ಇದೆ ಕಾರ್ಯಕ್ರಮದಲ್ಲಿ ಅಶ್ರಿತ ಫೌಂಡೇಶನ್ ಅಧ್ಯಕ್ಷೆ ಶ್ರೀಮತಿ ಜ್ಯೋತಿ ರವರು, ಶಿವಮೊಗ್ಗ ಕಟ್ಟಡ ಕಾರ್ಮಿಕ ಸಂಘದ ಜಿಲ್ಲಾ ಅಧ್ಯಕ್ಷರಾದ ಸುಬ್ರಮಣಿ, ನಗರಧ್ಯಕ್ಷರಾದ ಮಣಿಕಂಠ, ನಗರಪಾಲಿಕೆ ಮಾಜಿ ಸದಸ್ಯರಾದ ದೀಪಕ್ ಸಿಂಗ್, ಗ್ರಾಮಾಂತರ ಅಧ್ಯಕ್ಷರಾದ ಶ್ಯಾಮ್, ಕಾಂಗ್ರೆಸ್ ಮುಖಂಡರಾದ ರಾಜಶೇಖರ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…