ಭದ್ರಾವತಿ ನ್ಯೂಸ್…

ದಿನಾಂಕಃ-13-01-2022 ರಂದು ಬೆಳಗ್ಗೆ ಭದ್ರಾವತಿ ಪೇಪರ್ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ರಬ್ಬರ್ ಕಾಡು ಗ್ರಾಮದ ವಾಸಿಯೊಬ್ಬರು ತಮ್ಮ ವಾಸದ ಮನೆಗೆ ಬೀಗ ಹಾಕಿಕೊಂಡು ಕೆಲಸಕ್ಕೆ ಹೋಗಿದ್ದು, ಮಧ್ಯಾಹ್ನ ಮನೆಗೆ ವಾಪಾಸ್ ಬಂದು ನೋಡಿದಾಗ ಯಾರೋ ಕಳ್ಳರು ಮನೆಯ ಹಿಂಭಾಗಿಲಿಗೆ ಹಾಕಿದ್ದ ಬೀಗವನ್ನು ಮುರಿದು ಮನೆಯ ಒಳಗಡೆ ಅಲ್ಮೆರಾದಲ್ಲಿ ಮನೆ ಕಟ್ಟುವ ಸಲುವಾಗಿ ತಂದಿಟ್ಟಿದ್ದ ರೂ 6,00,000/- ನಗದು ಹಣ ಮತ್ತು ಸುಮಾರು 5,66,000/- ರೂ ಬೆಲೆಬಾಳುವ ಬಂಗಾರದ ಆಭರಣಗಳನ್ನು ಕಳ್ಳತನ ಮಾಡಿರುತ್ತಾರೆ.

ದೂರಿನ ಮೇರೆಗೆ ಗುನ್ನೆ ಸಂಖ್ಯೆ 0008/2022 ಕಲಂ 454, 380 ಐಪಿಸಿ ರೀತ್ಯಾ ಪ್ರಕರಣ ದಾಖಲಿಸಿ, ಪಿ.ಐ. ಪೇಪರ್ ಟೌನ್ ಪೊಲೀಸ್ ಠಾಣೆ, ಪಿಎಸ್ಐ ಹಾಗೂ ಸಿಬ್ಬಂದ್ಧಿಗಳ ತಂಡವು ಸದರಿ ಪ್ರಕರಣದ ತನಿಖೆ ಕೈಗೊಂಡು ದಿನಾಂಕಃ-10-03-2022 ರಂದು ಪ್ರಕರಣದ ಆರೋಪಿ ಚೇತನ್ ಎಸ್, 27 ವರ್ಷ, ರಬ್ಬರ್ ಕಾಡುಗ್ರಾಮ ಭದ್ರಾವತಿ ಈತನನ್ನು ದಸ್ತಗಿರಿ ಮಾಡಿ, ಆರೋಪಿತನಿಂದ ರೂ 5,60,000/- ನಗದು ಹಣ ಹಾಗೂ ರೂ 6,43,000/- ಅಂದಾಜು ಮೌಲ್ಯದ ಒಟ್ಟು 134.44 ಗ್ರಾಂ ತೂಕದ ಬಂಗಾರದ ಆಭರಣಗಳನ್ನು ವಶಪಡಿಸಿಕೊಂಡಿರುತ್ತಾರೆ.

ವರದಿ ಮಂಜುನಾಥ್ ಶೆಟ್ಟಿ…