ಶಿವಮೊಗ್ಗ: ಸಹ್ಯಾದ್ರಿ ಕಾಲೇಜಿನ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ನಿನ್ನೆ ರಾತ್ರಿ ಆಹಾರ ಸೇವನೆ ಬಳಿಕ 10 -15 ವಿದ್ಯಾರ್ಥಿನಿಯರ ಆರೋಗ್ಯದಲ್ಲಿ ಏರುಪೇರಾಗಿದ್ದು, ಕೆಲವರಿಗೆ ವಾಂತಿ ಮತ್ತು ಕೆಲವರಿಗೆ ಉಸಿರಾಟದ ತೊಂದರೆ ಉಂಟಾಗಿದ್ದರಿಂದ ಕೂಡಲೇ ಹಾಸ್ಟೆಲ್ ವಾರ್ಡನ್ ಅವರು ವಿದ್ಯಾರ್ಥಿನಿಯರನ್ನು ರಾತ್ರಿಯೇ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ವಿದ್ಯಾರ್ಥಿನಿಯರು ಹೊರಗಡೆಯಿಂದ ಏನಾದರೂ ಪದಾರ್ಥ ತರಿಸಿಕೊಂಡು ತಿಂದಿದ್ದಾರೆಯೇ ಎಂಬುದು ತನಿಖೆ ಮೂಲಕ ಗೊತ್ತಾಗಬೇಕಿದೆ. ವಿದ್ಯಾರ್ಥಿನಿಯರು ನಾವು ಹೊರಗಿನಿಂದ ಯಾವುದೇ ಪದಾರ್ಥ ತರಿಸಿಕೊಂಡು ತಿಂದಿಲ್ಲ ಎಂದು ತಿಳಿಸಿದ್ದಾರೆ. ಚಿಕಿತ್ಸೆ ನಂತರ ಎಲ್ಲಾ ವಿದ್ಯಾರ್ಥಿನಿಯರು ಚೇತರಿಸಿಕೊಂಡಿದ್ದು, ಅಪಾಯದಿಂದ ಪಾರಾಗಿದ್ದಾರೆ. ಆಸ್ಪತ್ರೆಗೆ ಜಿಪಂ ಮಾಜಿ ಸದಸ್ಯ ಕೆ.ಇ. ಕಾಂತೇಶ್ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಈ ಸಂದರ್ಭದಲ್ಲಿ ಪ್ರೊ. ಲತಾ, ಕುವೆಂಪು ವಿವಿ ಸಿಂಡಿಕೇಟ್ ಸದಸ್ಯ ಸಂತೋಷ್ ಬಳ್ಳೆಕೆರೆ, ಜಗನ್ನಾಥ್, ಹರ್ಷ ಮೊದಲಾದವರಿದ್ದರು.

ವರದಿ ಮಂಜುನಾಥ್ ಶೆಟ್ಟಿ…