ಕೇಂದ್ರ ಸರಕಾರದ ಪೆಟ್ರೋಲ್ ಡೀಸೆಲ್ ಹಾಗೂ ಅಡುಗೆ ಅನಿಲ ದರ ಏರಿಕೆಯನ್ನು ಖಂಡಿಸಿ ಮಾಜಿ ಶಾಸಕರಾದ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ಕೋಣಂದೂರಿನ ಪೆಟ್ರೋಲ್ ಬಂಕ್ ನಲ್ಲಿ ಪ್ರತಿಭಟನೆ ನಡೆಸಲಾಯಿತು . ಕೇಂದ್ರ ಸರ್ಕಾರ ಈ ಕೂಡಲೇ ಪೆಟ್ರೋಲ್ ಡೀಸೆಲ್ ಬೆಲೆಯನ್ನು ಕಡಿಮೆ ಮಾಡಿ ಜನರ ಹೊರೆಯನ್ನು ಕಡಿಮೆ ಮಾಡಬೇಕು . ಕೃಷಿ ಚಟುವಟಿಕೆಗಳಿಗೆ ಡೀಸೆಲ್ ಅವಲಂಬಿಸಿರುವುದರಿಂದ ಡೀಸೆಲ್ ಬೆಲೆ ಏರಿಕೆಯಿಂದಾಗಿ ಕೃಷಿಗೆ ತೊಡಕುಂಟಾಗಿದೆ ಎಂದರು. ಈ ಸಂದರ್ಭದಲ್ಲಿ ಮುಡುಬ ರಾಘವೇಂದ್ರ, ಅಮರ್ ನಾಥ್ ಶೆಟ್ಟಿ, ಸುಭಾಷ್ ಕುಲಾಲ್, ಪೂರ್ಣೇಶ್ ಕೆಳಕೆರೆ ,ಕುರುವಳ್ಳಿ ನಾಗರಾಜ್ ಮುಂತಾದವರಿದ್ದರು.


ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ

ಶಿವಮೊಗ್ಗದ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153