ನೂತನ ವಿಧಾನ ಪರಿಷತ್ ಸದಸ್ಯರಾದ ಶ್ರೀ ಮಂಜುನಾಥ ಭಂಡಾರಿಯವರ ಆಯ್ಕೆಯಾದ ಹಿನ್ನೆಲೆ ಇಂದು ಶಿವಮೊಗ್ಗ ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ಶಿವಮೊಗ್ಗ ಡಿ.ಕೆ ಶಿವಕುಮಾರ್ ಬ್ರಿಗೇಡ್ ವತಿಯಿಂದ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಸರ್ವಜನಿಕರಿಗೆ ಉಚಿತವಾಗಿ ತಂಪಾದ ಮಜ್ಜಿಗೆ ವಿತರಿಸಲಾಯಿತು.

ಕೆಪಿಸಿಸಿ ಸಂಯೋಜಕ ದೇವೇಂದ್ರಪ್ಪ ಮಾತನಾಡಿ ಭಂಡಾರಿಯವರು ವಿದ್ಯಾರ್ಥಿ ಕಾಂಗ್ರೆಸ್ ಯುವ ಕಾಂಗ್ರೆಸ್ ಅನ್ನು ಶಿವಮೊಗ್ಗ ಜಿಲ್ಲೆಯಲ್ಲಿ ಗಟ್ಟಿಯಾಗಿ ತಳಪಾಯ ಮಾಡಿಕೊಟ್ಟವರು.ಅವರ ಗರಡಿಯಲ್ಲಿ ಬೆಳೆದವರು ಶಿವಮೊಗ್ಗ ಜಿಲ್ಲೆಯಲ್ಲಿ ಅಲ್ಲದೆ ರಾಜ್ಯದಲ್ಲಿ ಉತ್ತಮ ನಾಯಕರಾಗಿದ್ದಾರೆ ಎಲ್ಲಾ ಜಾತಿ ವರ್ಗಭೇದವಿಲ್ಲದೆ ಕಾಂಗ್ರೆಸ್ ಪಕ್ಷಕ್ಕೆ ಹೊಸ ಹೊಸ ಯುವಕರನ್ನು ಕಾಂಗ್ರೆಸ್ ಪಕ್ಷಕ್ಕೆ ತಂದಂತಹ ಕೀರ್ತಿ ಅವರಿಗೆ ಸಲ್ಲಬೇಕು ಅವರ ರಾಜಕೀಯ ಭವಿಷ್ಯ ಉತ್ತಮವಾಗಿ ಇನ್ನಷ್ಟು ಜನಸೇವೆ ಮಾಡಲ್ಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಕೆಸ್ತೂರ್ ಮಂಜುನಾಥ ಶಿವಮೊಗ್ಗ ದಕ್ಷಿಣಭಾಗ ಕಾಂಗ್ರೆಸ್ ಅಧ್ಯಕ್ಷ ಕಾಶಿ ವಿಶ್ವನಾಥ್ ಉತ್ತರ ಬ್ಲಾಕ್ ಅಧ್ಯಕ್ಷ ನಾಗರಾಜ ಶಿವಮೊಗ್ಗ ಮಹಾನಗರ ಪಾಲಿಕೆ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯದರ್ಶಿ ಯೋಗೀಶ್.ಐ ಟಿಯುಸಿ ಅಧ್ಯಕ್ಷರಾದ ಕವಿತಾ ರಾಘವೇಂದ್ರ ಅರ್ಜುನ್. ವಿದ್ಯಾರ್ಥಿ ಮುಖಂಡರಾದ ನಿಹಾಲ್ ಸಿಂಗ್. ವಿಶಾಲ್. ರಾಹುಲ್ ಜಾನ್ ಭರತ್. ಡಿಕೆ ಶಿವಕುಮಾರ್ ಬ್ರಿಗೇಡ್ನ ರಾಘವೇಂದ್ರ.ಮುಂತಾದವರು ಹಾಜರಿದ್ದರು.

ವರದಿ ಮಂಜುನಾಥ್ ಶೆಟ್ಟಿ…