ಶಿವಮೊಗ್ಗ ಜಿಲ್ಲೆಯಲ್ಲಿ ಪ್ರತಿಷ್ಠಿತ ಕಾಲೇಜುಗಳಲ್ಲಿ ಒಂದಾದ ದೇಶಿಯ ವಿದ್ಯಾ ಶಾಲೆ, ವತಿಯಿಂದ ಆಯನೂರು ಕೋಹಳ್ಳಿ ಗ್ರಾಮದ ಶ್ರೀ ಸಿದ್ಧೇಶ್ವರ ದೇವಸ್ಥಾನದ ಆವರಣದಲ್ಲಿ 7 ದಿನಗಳಿಂದ ನಡೆಯುತ್ತಿರುವ ವಿಶೇಷ ವಾರ್ಷಿಕ ಶಿಬಿರ ಕಾರ್ಯಕ್ರಮ ಈ ದಿನ ಮುಕ್ತಾಯಗೊಂಡಿತ್ತು.

ದೇಶಿಯ ವಿದ್ಯಾ ಶಾಲಾ ವತಿಯಿಂದ ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ರಾಷ್ಟ್ರೀಯ ಸೇವಾ ಯೋಜನಾ ಘಟಕ 1 ಮತ್ತು 2 ಘಟಕ ವಿಶೇಷ ವಾರ್ಷಿಕ ಶಿಬಿರ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು.
ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಮಾತನಾಡಿ ಮಕ್ಕಳು ಜೀವನವನ್ನು ಹೇಗೆ ರೂಪಿಸಿಕೊಳ್ಳಬೇಕು ಭವಿಷ್ಯದಲ್ಲಿ ದೇಶದ ಒಳ್ಳೆಯ ಪ್ರಜೆಗಳಾಗಿ ನೀವು ಬೆಳೆಯಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ದೇಶೀಯ ವಿದ್ಯಾ ಶಾಲೆಯ ಉಪಾಧ್ಯಕ್ಷರಾದ ಎಸ್. ಪಿ. ದಿನೇಶ್, ಸಹ ಕಾರ್ಯದರ್ಶಿಗಳಾದ ಡಾ. ಎ. ಸತೀಶ್ ಕುಮಾರ್ ಶೆಟ್ಟಿ , ಮಂಜುಳಾ ಆಯನೂರು ಮಂಜುನಾಥ್, ಮಂಜುನಾಥ್ ಶೆಟ್ಟಿ ಆಯನೂರು ಗ್ರಾಮ ಪಂಚಾಯಿತಿ ಅಧ್ಯಕ್ಷರು ಸುಮಿತ್ರ ಉಪಾಧ್ಯಕ್ಷರು ಚಂದ್ರಕಲಾ, ಸದಸ್ಯರು ಹಾಗೂ ದೇಶೀಯ ವಿದ್ಯಾ ಶಾಲೆಯ ಪ್ರಾಂಶುಪಾಲರು, ಉಪನ್ಯಾಸಕರು, ಸಿಬ್ಬಂದಿಗಳು ಮುಂತಾದವರು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…