ಶಿವಮೊಗ್ಗ: ನಗರದ ಮಂಡ್ಲಿಯ ಕೃಷ್ಣ ರಾಜೇಂದ್ರ ನೀರು ಸರಬರಾಜು ಕೇಂದ್ರ ಹಿಂಭಾಗ ತುಂಗಾ ನದಿಗೆ ವಾದಿ ಎ ಹುದಾದಿಂದ ಮಂಡ್ಲಿ ವೀರಶೈವ ಸ್ಮಶಾನದ ವರೆಗೆ ಅಡ್ಡಲಾಗಿ 10 ಕೋಟಿ ರೂ. ವೆಚ್ಚದಲ್ಲಿ ಸುಮಾರು 200 ಮೀ. ಉದ್ದದ ಚೆಕ್ ಡ್ಯಾಂ ನಿರ್ಮಾಣ ಕಾಮಗಾರಿಗೆ ಸಚಿವ ಕೆ.ಎಸ್. ಈಶ್ವರಪ್ಪ ಇಂದು ಗುದ್ದಲಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮೇಯರ್ ಸುನಿತಾ ಅಣ್ಣಪ್ಪ, ಸೂಡಾ ಅಧ್ಯಕ್ಷ ನಾಗರಾಜ್, ಪಾಲಿಕೆ ಸದಸ್ಯರಾದ ಚನ್ನಬಸಪ್ಪ, ಪ್ರಭು, ಮಂಜುನಾಥ್, ಜ್ಞಾನೇಶ್ವರ್, ವಿಶ್ವಾಸ್, ಅನಿತಾ ರವಿಶಂಕರ್, ಸಂಗೀತಾ, ಬಿಜೆಪಿ ನಗರಾಧ್ಯಕ್ಷ ಜಗದೀಶ್ ಮೊದಲಾದವರಿದ್ದರು.

ವರದಿ ಮಂಜುನಾಥ್ ಶೆಟ್ಟಿ…