20/03/2022 ಭಾನುವಾರ ಬೆಳಿಗ್ಗೆ ಶಿವಮೊಗ್ಗ ನಗರದ, ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಸಚಿವರಾದ ಸನ್ಮಾನ್ಯ ಶ್ರೀ ಕೆ.ಎಸ್. ಈಶ್ವರಪ್ಪ ರವರಿಗೆ, ಬಿ.ಹೆಚ್.ರಸ್ತೆಯ “ಮೈನ್ ಮಿಡ್ಲ್ ಸ್ಕೂಲ್”, ಹಳೆ ವಿದ್ಯಾರ್ಥಿಗಳ ಸಂಘದಿಂದ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾದ ಶ್ರೀ ಚನ್ನವೀರಪ್ಪ ಗಾಮನಗಟ್ಟಿ ರವರು, ಈ ಶಾಲೆಗೆ 134 ವರ್ಷಗಳ ಇತಿಹಾಸವಿದೆ, ಇದು 1ರಿಂದ 5ನೇ ತರಗತಿ ಕನ್ನಡ ಮಾಧ್ಯಮ ಹಾಗೂ 6ಮತ್ತು 7ನೇ ತರಗತಿ ಕನ್ನಡ ಮತ್ತು ಆಂಗ್ಲ ಮಾಧ್ಯಮವಿದೆ, 1ರಿಂದ 5ನೇ ತರಗತಿ ಕನ್ನಡ ಮಾಧ್ಯಮ ವಿರುವುದರಿಂದ ಮಕ್ಕಳ ದಾಖಲಾತಿ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ.
ಹಿಂದೆ ಸಾವಿರಾರು ವಿದ್ಯಾರ್ಥಿಗಳು ಕನ್ನಡ ಮಾಧ್ಯಮದಲ್ಲಿ ಈ ಶಾಲೆಯಲ್ಲಿ ಓದುತ್ತಿದ್ದರು, ಕೆಲವು ವರ್ಷಗಳಿಂದ ಆಂಗ್ಲ ಮಾಧ್ಯಮದ ಬರದಲ್ಲಿ ಕನ್ನಡ ಮಾಧ್ಯಮಕ್ಕೆ ಮಕ್ಕಳ ಸೇರುಸುವಿಕೆ ಕಡಿಮೆಯಾಗಿದೆ.

ನಾಲ್ಕು ವರ್ಷಗಳ ಹಿಂದೆ 180ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದ್ದ ಶಾಲೆ 120, ನಂತರ 80 ಹಳೆದ ವರ್ಷ 60ರ ಮಕ್ಕಳ ಸಂಖ್ಯೆ, ಇಂದು 30ಕ್ಕೆ ಬಂದಿದೆ, ಮಕ್ಕಳ ಸಂಖ್ಯೆ ಕಡಿಮೆ ಇರುವ ಎಷ್ಟೂ ಸರ್ಕಾರಿ ಶಾಲೆಗಳು ಮುಚ್ಚಿಹೋಗಿವೆ, ಇತಿಹಾಸ ವಿರುವ ಬ್ರಿಟಿಷ್ ಬಂಗಲೇಯ ಮೈನ್ ಮಿಡ್ಲ್ ಸ್ಕೂಲ್ ಗೆ ಕೆಪಿಎಸ್ ಅಡಿ ಎಲ್.ಕೆ.ಜಿ ಮತ್ತು ಯು.ಕೆ.ಜಿ ಹಾಗೂ ಒಂದನೇ ತರಗತಿಯಿಂದಲೇ ಆಂಗ್ಲ ಮಾಧ್ಯಮಕ್ಕೆ ಅವಕಾಶ ಕಲ್ಪಿಸಿ ಕೊಡಲು ಹಳೆ ವಿದ್ಯಾರ್ಥಿಗಳ ಸಂಘದಿಂದ ಮನವಿ ಮಾಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು ನಾಳೆಯೇ ಬೆಂಗಳೂರಿನಲ್ಲಿ ಶಿಕ್ಷಣ ಸಚಿವರೊಂದಿಗೆ ಮಾತನಾಡುತ್ತೇನೆ, ಯಾವುದೇ ಕಾರಣಕ್ಕೂ ಶಾಲೆಗಳ ಮುಚ್ಚಲು ಬಿಡುವುದಿಲ್ಲ ಎಂದರು.

ಈ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿಗಳ ಸಂಘದ ಉಪಾಧ್ಯಕ್ಷರಾದ ಶ್ರೀ ಪರಶುರಾಮ,
ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಯತೀಶ್ ರಾಜ್, ಕಾರ್ಯದರ್ಶಿ ಶ್ರೀ ಮತಿ ಸವಿತಾ ಕೆ, ಸಹ ಕಾರ್ಯದರ್ಶಿ ಶ್ರೀ ವಿಶ್ವನಾಥ್ ಜೆ, ಖಜಾಂಚಿ ಶ್ರೀ ಪ್ರಕಾಶ್, ಸದಸ್ಯರಾದ ಶ್ರೀ ಚಂದ್ರಶೇಖರ ಕೆ. ಶ್ರೀ ಪರಮೇಶ್, ಶ್ರೀ ವಸಂತ್ ನಾಯ್ಕ್, ಹಾಗೂ ಇತರರೂ ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…