ತೀರ್ಥಹಳ್ಳಿಯ ವಿದ್ಯಾಧಿರಾಜ ಸಭಾಂಗಣದಲ್ಲಿ ಇಂದು ಬೆಳಗ್ಗೆ ಜಿಲ್ಲಾ ಪ್ರಶಿಕ್ಷಣ ವರ್ಗ 2022 ದ ಉದ್ಘಾಟನೆಯನ್ನು ರಾಜ್ಯ ಪ್ರಕೋಷ್ಠಗಳ ಸಂಯೋಜಕರಾದ ಎಂ ಬಿ ಭಾನುಪ್ರಕಾಶ್ ಅವರು ಉದ್ಘಾಟನೆ ಮಾಡಿದರು.

ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಟಿ ಡಿ ಮೇಘರಾಜ್ ವಿಭಾಗ ಸಹ ಪ್ರಭಾರಿ ಎನ್ ಎಸ್ ಹೆಗ್ಡೆ ವಿಭಾಗ ಸಂಘಟನಾ ಕಾರ್ಯದರ್ಶಿ ಎ ಎನ್ ನಟರಾಜ್ ತೀರ್ಥಹಳ್ಳಿ ಮಂಡಲ ಅಧ್ಯಕ್ಷರಾದ ರಾಘವೇಂದ್ರ ಬಾಳೆಬೈಲು ಜಿಲ್ಲಾ ಪ್ರಶಿಕ್ಷಣ ಸಂಚಾಲಕರಾದ ಸಾಯಿ ವರ ಪ್ರಸಾದ್ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಗಳಾದ ಬಿ ಕೆ ಶ್ರೀನಾಥ್, ಶಿವರಾಜ್, ಧರ್ಮಪ್ರಸಾದ್ ಮತ್ತು ಪ್ರಮುಖರು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…