ಶಿವಮೊಗ್ಗ: ರಾಜ್ಯದಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರನ್ನು ಕಾಯಂಗೊಳಿಸಬೇಕೆಂದು ಆಗ್ರಹಿಸಿ ಜೆಡಿಯು ಶಿವಮೊಗ್ಗ ಘಟಕದ ವತಿಯಿಂದ ಇಂದು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದೆ.

ರಾಜ್ಯದಲ್ಲಿ ಸುಮಾರು 27 ಸಾವಿರಕ್ಕೂ ಹೆಚ್ಚು ಪೌರ ಕಾರ್ಮಿಕರು ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದಾರೆ. ಹಲವು ವರ್ಷಗಳಿಂದ ಇವರು ಕೆಲಸ ಮಾಡುತ್ತಾ ಬಂದಿದ್ದರೂ, ಸರ್ಕಾರ ಇವರನ್ನು ಕಾಯಂ ಮಾಡಿಲ್ಲ ಎಂದು ಆರೋಪಿಸಿದರು.ಕಳೆದ ಎರಡು ವರ್ಷಗಳಿಂದ ಕೊರೋನಾ ಮಹಾಮಾರಿಗೆ ತುತ್ತಾಗಿ ಸಂಕಷ್ಟದಲ್ಲಿದ್ದಾರೆ. ಆ ಸಮಯದಲ್ಲೂ ಕೂಡ ಅಚ್ಚುಕಟ್ಟಾಗಿ ಕೆಲಸ ಮಾಡಿದ್ದಾರೆ. ಆದ್ದರಿಂದ ಇವರನ್ನು ಕಾಯಂಗೊಳಿಸಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಈ ಸಂದರ್ಭದಲ್ಲಿ ಜೆಡಿಯು ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್. ಗೌಡ, ಜಿಲ್ಲಾಧ್ಯಕ್ಷ ದೇವರಾಜ್ ಶಿಂಧೆ ಇದ್ದರು.

ವರದಿ ಮಂಜುನಾಥ್ ಶೆಟ್ಟಿ…