ಶಿವಮೊಗ್ಗದಲ್ಲಿ 2015ರಲ್ಲಿ ನಡೆದ ಕೋಮು ಗಲಭೆಯಲ್ಲಿ ಹತನಾದ ದಿವಂಗತ ವಿಶ್ವನಾಥ ಶೆಟ್ಟಿ ಇವರ ಮಗನಾದ ಚಿರಂಜೀವಿ ಯಶಸ್ ವಿ. ಶೆಟ್ಟಿ ಇವನ ಮುಂದಿನ ಶಿಕ್ಷಣಕ್ಕೆ ಸಹಾಯವಾಗುವಂತೆ ರೂ. ಒಂದು ಲಕ್ಷಗಳನ್ನು ಮತ್ತು ಅವರ ತಾಯಿ ಶ್ರೀಮತಿ ಮೀನಾಕ್ಷಮ್ಮ ಇವರ ಜೀವನಕ್ಕೆ ನೆರವಾಗಲು 25000 ಗಳನ್ನು ದೇಣಿಗೆಯಾಗಿ ನೀಡಲಾಯಿತು.

ಜಾಹೀರಾತಿಗಾಗಿ ಸಂಪರ್ಕಿಸಿ
9008931515

ಇಂದು ಶಿವಮೊಗ್ಗ ಬಂಟರ ಭವನ ಸಭಾಂಗಣದಲ್ಲಿ ನಡೆದ ಹೃದಯಸ್ಪರ್ಶಿ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷರಾದ ಡಾ.ಎ. ಸತೀಶ್ ಕುಮಾರ್ ಶೆಟ್ಟಿ ಇವರು ಚೆಕ್ಕನ್ನು ಹಸ್ತಾಂತರಿಸಿದರು. ಈ ಕಾರ್ಯಕ್ರಮದಲ್ಲಿ ಕೊಪ್ಪ ಬಂಟರ ಸಂಘದ ಅಧ್ಯಕ್ಷರಾದ ಶ್ರೀ ಸುಬ್ರಹ್ಮಣ್ಯ ಶೆಟ್ಟಿ ಶಿವಮೊಗ್ಗ ಬಂಟರ ಸಂಘದ ಕಾರ್ಯದರ್ಶಿ ಸುರೇಶ್ ಶೆಟ್ಟಿ ಹಾಗೂ ಸಮಾಜದ ಪ್ರಮುಖರಾದ ಕೃಷ್ಣಪ್ಪ ಶೆಟ್ಟಿ, ಎಸ್. ಕೃಷ್ಣಶೆಟ್ಟಿ, ಸುರೇಶ್ ಕುಮಾರ್ ಶೆಟ್ಟಿ, ದಿವಾಕರ ಶೆಟ್ಟಿ, ರಾಜೀವ ಶೆಟ್ಟಿ, ಅರುಣ್ ಶೆಟ್ಟಿ, ಮಂಜುನಾಥ ಶೆಟ್ಟಿ, ಪ್ರಭಾಕರ್ ಶೆಟ್ಟಿ ,ಸಾಯಿ ಪ್ರಸಾದ್ ಶೆಟ್ಟಿ, ಸುಧಾಕರ್ ಶೆಟ್ಟಿ, ಉದಯ್ ಶೆಟ್ಟಿ, ಪ್ರದೀಪ್ ಶೆಟ್ಟಿ, ಆನಂದ ಶೆಟ್ಟಿ ಹಾಗೂ ಇತರರು ಹಾಜರಿದ್ದರು.

ವರದಿ ಮಂಜುನಾಥ್ ಶೆಟ್ಟಿ…