ಶಿವಮೊಗ್ಗ ನಗರದ ನೆಹರು ರಸ್ತೆಯಲ್ಲಿರುವ ಜಿಲ್ಲಾ ಜಾತ್ಯತೀತ ಜನತಾದಳ ಕಚೇರಿಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಶ್ರೀಕಾಂತ್ ರವರ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಶ್ರೀಕಾಂತ ರವರು ಶಿವಮೊಗ್ಗದ ಮಹಾಜನತೆಗೆ ನಾನು ಸದಾ ಚಿರಋಣಿ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕಿ ಶಾರದಾ ಪೂರ್ಯನಾಯ್ಕ , ಪಾಲಿಕೆ ಸದಸ್ಯರಾದ ನಾಗರಾಜ್ ಕಂಕರಿ, ಮುಖಂಡರಾದ ರಾಮಕೃಷ್ಣ, ಪಾಲಾಕ್ಷಿ, ನರಸಿಂಹ ಗಂಧದ ಮನೆ,ಪುರುಷೋತ್ತಮ್ , ಭಾಸ್ಕರ,ಸಿದ್ದಪ್ಪ ಮುಂತಾದವರು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…