ಶಿವಮೊಗ್ಗ: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆದ ಶಿವಮೊಗ್ಗ ಪ್ರೀಮಿಯರ್ ಲೀಗ್ ಪಂದ್ಯಾವಳಿಯ ಉದ್ಘಾಟನೆ ಮಾಡಿದ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಕೆ.ಈ. ಕಾಂತೇಶ್ ಅವರೊಂದಿಗೆ ಸ್ಥಳೀಯ ಮುಖಂಡರು ಭಾಗವಹಿಸಿದ್ದರು.

ಉದ್ಘಾಟನೆ ಮಾಡಿದ ನಂತರ ಮಾತನಾಡಿದ ಅವರು, ಕ್ರಿಕೆಟ್ ಎಲ್ಲ ವಯಸ್ಸಿನವರು ಇಷ್ಟ ಪಡುವ ಪಂದ್ಯ. ಅದನ್ನು ಎಲ್ಲರೂ ಎಲ್ಲ ಸಮಯದಲ್ಲೂ ಕೂಡ ಇಷ್ಟ ಪಡುತ್ತಾರೆ. ಈ ಕ್ರಿಕೆಟ್ ಲೀಗ್ ಎಲ್ಲರ ಮನೆ ಮನಮುಟ್ಟಲಿ ಎಂದು ಶುಭ ಹಾರೈಸಿದರು. ಇವತ್ತು ನಡೆಯುತ್ತಿರುವ ಪಂದ್ಯಗಳಲ್ಲಿ ಸುಮಾರು 8 ತಂಡಗಳು ಇಲ್ಲಿ ಭಾಗವಹಿಸಿವೆ. ಈ ಸಂದರ್ಭದಲ್ಲಿ ಹೆಚ್.ಸಿ. ಯೋಗೀಶ್, ವಿಶ್ವಾಸ್ ಮೊದಲಾದವರಿದ್ದರು.

ವರದಿ ಮಂಜುನಾಥ್ ಶೆಟ್ಟಿ…