ಕೃಷಿ ಪ್ರಶಸ್ತಿ ನೀಡಲು ಶಿವಮೊಗ್ಗ ತಾಲ್ಲೂಕಿನ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಭತ್ತದ ಬೆಳೆಯಲ್ಲಿ ಎಲ್ಲ ಮಟ್ಟಗಳಿಗೂ ಅನ್ವಯವಾಗುವಂತೆ (ತಾಲ್ಲೂಕು, ಜಿಲ್ಲಾ, ರಾಜ್ಯ) ಏಕರೂಪದ ಅರ್ಜಿಯನ್ನು ಶಿವಮೊಗ್ಗ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರಿಗೆ ಅಥವಾ ರೈತ ಸಂಪರ್ಕ ಕೇಂದ್ರದ ಮುಖ್ಯಸ್ಥರಿಗೆ ಆಗಸ್ಟ್ 31 ರೊಳಗೆ ನಿಗದಿತ ಶುಲ್ಕ ಪಾವತಿಸಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರ, ಅಥವಾ ಶಿವಮೊಗ್ಗ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದೆಂದು ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕ ಹೆಚ್.ಎಸ್.ಶಿವರಾಜ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.