ದಿನನಿತ್ಯ ಅಡುಗೆ ಅನಿಲ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವ ಜನವಿರೋಧಿ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ- ಗ್ಯಾಸ್ ಸಿಲಿಂಡರ್ ಗೆ ಶ್ರದ್ದಾಂಜಲಿ ಸಲ್ಲಿಸಿ , ಸೌದೆ ಒಲೆಯಲ್ಲಿ ಚಿತ್ರಾನ್ನ ತಯಾರಿಸಿ ಸಾರ್ವಜನಿಕರಿಗೆ ಹಂಚುವ ಮುಖಾಂತರ ಶಿವಮೊಗ್ಗ ನಗರ ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ನಿಂದ ವಿನೋಬ ನಗರ ಪೊಲೀಸ್ ಚೌಕಿ ವೃತ್ತದಲ್ಲಿ ಪ್ರತಿಭಟಿಸಲಾಯಿತು.

ಈ ಪ್ರತಿಭಟನೆಯ ನೇತೃತ್ವವನ್ನು ಶಿವಮೊಗ್ಗನಗರ ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಬಿ. ಲೋಕೇಶ್ ವಹಿಸಿದ್ದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪಿ.ಓ. ಶಿವಕುಮಾರ್ ಜಿಲ್ಲಾ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಎಚ್.ಪಿ. ಗಿರೀಶ್, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ. ರಾಹುಲ್ , ರಾಕೇಶ್ ಎಂ ,ಗಗನ್ ಗೌಡ, ಪಕ್ಷದ ಮುಖಂಡರಾದ ,ಪ್ರಕಾಶ್, ತ0ಗರಾಜ್, ಗೋಪಿ ಚೌಕಿ, ನಗರ ಯುವ ಕಾಂಗ್ರೆಸ್ ಪದಾಧಿಕಾರಿಗಳಾದ ಕೆಎಲ್ ಪವನ್, ರಾಹುಲ್ ,ದರ್ಶನ್ , ಪೂರ್ವಿಕ್, ಪ್ರಸನ್ನ ,ಮನು , ಗೋಪಿ, ಓಂ ಸಿಂಗ್, ಪ್ರಣವ್, ಕಿರಣ್ ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…