ದಿನನಿತ್ಯ ಅಡುಗೆ ಅನಿಲ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವ ಜನವಿರೋಧಿ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ- “ಬಿಜೆಪಿ ಹಠಾವೋ ದೇಶ್ ಬಚಾವೋ” ಎಂಬ ಘೋಷಣೆಯೊಂದಿಗೆ ಶಿವಮೊಗ್ಗ ಗ್ರಾಮಾಂತರ ಯುವ ಕಾಂಗ್ರೆಸ್ ಹೊಳೆಹೊನ್ನೂರು ಬ್ಲಾಕ್ ನಿಂದ ಬೃಹತ್ ಪ್ರತಿಭಟನೆ.

ದಿನನಿತ್ಯ ಅಡುಗೆ ಅನಿಲ ಅಗತ್ಯ ವಸ್ತುಗಳ ಬೆಲೆಯೇರಿಕೆ ಮಾಡುತ್ತಿರುವ ಹಾಗೂ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಗಳ ಬೆಲೆ ಕಡಿಮೆ ಇದ್ದರೂ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಏರಿಕೆ, ಮಾಡಿ ದೇಶದ ಜನತೆಗೆ ದಿನನಿತ್ಯ ಬರೆ ಹಾಕುತ್ತಿರುವ ಜನವಿರೋಧಿ ಬಿಜೆಪಿ ಸರ್ಕಾರದ ನೀತಿಯನ್ನು ಖಂಡಿಸಿ ಹೊಳೆಹೊನ್ನೂರು ಗಾಂಧಿ ವೃತ್ತದಲ್ಲಿ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟಿಸಲಾಯಿತು.

ದೇಶಕ್ಕೆ ಅಚ್ಚೇ ದಿನ್ ತರುತ್ತೇನೆಂದು ಸುಳ್ಳು ಭರವಸೆ ನೀಡಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಅಡುಗೆ ಅನಿಲದ ಪೆಟ್ರೋಲ್, ಡೀಸೆಲ್ , ರಸಗೊಬ್ಬರ , ಔಷಧಿ ಹಾಗೂ ಕರ್ನಾಟಕದ ರಾಜ್ಯ ಬಿಜೆಪಿ ಸರ್ಕಾರ ವಿದ್ಯುತ್ ದರವನ್ನು ದಿನನಿತ್ಯ ಏರಿಕೆ ಮಾಡುತ್ತಾ ಈಗಾಗಲೇ ಕೋವಿಡ್ ಸಂಕಷ್ಟದಲ್ಲಿರುವ ಶ್ರೀಸಾಮಾನ್ಯನ ತೆರಿಗೆ ಎಂಬ ಕೂಪದಿಂದ ಕಿತ್ತು ತಿನ್ನುತ್ತಿರುವ ಬಿಜೆಪಿ ಸರ್ಕಾರದ ಜನವಿರೋಧ ನೀತಿಯು ತೀವ್ರ ಖಂಡನೀಯ.

ಈಗಾಗಲೇ ಹಲವಾರು ರೈತ-ಕಾರ್ಮಿಕ – ಯುವಕ ವಿದ್ಯಾರ್ಥಿ ವಿರೋಧಿ ನೀತಿಗಳನ್ನು ಅನುಷ್ಠಾನಗೊಳಿಸಿ ದೇಶದ ಹಲವಾರು ಸರ್ಕಾರಿ ವಲಯಗಳನ್ನು ಖಾಸಗೀಕರಣ ಮಾಡಲು ಹೊರಟಿರುವ ಹಾಗೂ ಕೋವಿಡ್ ನಿರ್ವಹಣೆಯಲ್ಲಿ ವಿಫಲವಾದ ಈ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಹಲವು ಬಾರಿ ಎಚ್ಚರಿಕೆ ಸಂದೇಶಗಳನ್ನು ನೀಡಿದ್ದು , ಕೂಡಲೇ ರಾಷ್ಟ್ರಪತಿಗಳು ಈ ಜನವಿರೋಧಿ ಕೇಂದ್ರ ಬಿಜೆಪಿ ಸರ್ಕಾರವನ್ನು ವಜಾ ಮಾಡಬೇಕು ಎಂದು ಯುವ ಕಾಂಗ್ರೆಸ್ ಆಗ್ರಹಿಸುತ್ತದೆ.

ಈ ಪ್ರತಿಭಟನೆಯ ನೇತೃತ್ವವನ್ನು ಗ್ರಾಮಾಂತರ ಯುವ ಕಾಂಗ್ರೆಸ್ ಹೊಳೆಹೊನ್ನೂರು ಬ್ಲಾಕ್ ಅಧ್ಯಕ್ಷರಾದ ಈ.ಟಿ.ನಿತಿನ್ ವಹಿಸಿದ್ದರು.

ಈ ಸಂದರ್ಭದಲ್ಲಿ ಶಿವಮೊಗ್ಗ ಗ್ರಾಮಾಂತರ ನಿಕಟಪೂರ್ವ ಅಭ್ಯರ್ಥಿ ಶ್ರೀನಿವಾಸ್ ಕರಿಯಣ್ಣ,ಸೇವಾದಳ ಅಧ್ಯಕ್ಷ ವೈ ಎಚ್ ನಾಗರಾಜ್ ,ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಆರ್ ಉಮೇಶ್,ನಾಗೇಶ,ಸಚಿನ್ ಶಿಂಧೆ, ಮಲ್ಲೇಶ್,ಸಚಿನ್ ಸಿಂಧ್ಯಾ,ಯುವರಾಜ್,ಶಶಿಕುಮಾರ್,ಸಂಜಯ್ ಶಿಂಧೆ ಮುಂತಾದವರು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…