ಹರಿಹರಪುರ ಶ್ರೀ ಮಠದ ಮಹಾಕುಂಭಾಭಿಷೇಕದ ಅಂಗವಾಗಿ ಇಂದು ಶ್ರೀ ನೂತನ ಲಕ್ಷ್ಮಿ ನರಸಿಂಹ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು, ಶ್ರೀ ಶಾರದಾ ಲಕ್ಷ್ಮೀನರಸಿಂಹ ಪೀಠದ ಪರಮ ಪೂಜ್ಯ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತೀ ಮಹಾಸ್ವಾಮಿಗಳವರ ಆಶೀರ್ವಾದವನ್ನು ಸಂಸದರಾದ ಬಿ. ವೈ. ರಾಘವೇಂದ್ರ ರವರು ಪಡೆದರು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹರಾಗಿ ಕರ್ನಾಟಕದ ದತ್ತಾತ್ರೇಯ ಹೊಸಬಾಳೆರವರು, ಶ್ರೀ ಮಠದ ಆಡಳಿತ ಅಧಿಕಾರಿ,ಬಿ.ಎಸ್ ರವಿ ಶಂಕರ್, ಜ್ಯೋತಿ ಪ್ರಕಾಶ್, ಎಸ್ ದತ್ತಾತ್ರಿ, ದಿವಾಕರ್ ಶೆಟ್ಟಿ ,ಸಂತೋಷ್ ಬಳ್ಳೆಕೆರೆ, ರಾಜೇಶ್ ಕಾಮತ್,ಮತ್ತಿತರರು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…