ಶಿವಮೊಗ್ಗ: ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ಇಂದು ಡಿಕೆ ಶಿವಕುಮಾರ್ ಬ್ರಿಗೇಡ್ ವತಿಯಿಂದ ಬೇಸಿಗೆ ಕಾಲದ ಅಂಗವಾಗಿ ಸುಮಾರು ಎರಡು ತಿಂಗಳವರೆಗೆ ಸಾರ್ವಜನಿಕರಿಗೆ ಸಂಚಾರಿ ವಾಹನದ ಮೂಲಕ ಶಿವಮೊಗ್ಗ ನಗರದಲ್ಲಿ ಜನಸಂದಣಿ ಇರುವ ಜಾಗದಲ್ಲಿ ಪ್ರತಿದಿನ 500 ಲೀಟರ್ ಮಜ್ಜಿಗೆ, ಪಾನಕ, ಶುದ್ಧ ಕುಡಿಯುವ ನೀರು ವಿತರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಇಂದು ಕಾಂಗ್ರೆಸ್ ಮುಖಂಡರು ಹಾಗೂ ಪ್ರಮುಖರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಕಾರ್ಯಕ್ರಮದ ನಿರ್ವಾಹಕ, ಕೆಪಿಸಿಸಿ ಕಾರ್ಯದರ್ಶಿ ಕೆ. ದೇವೇಂದ್ರಪ್ಪ, ಮಾಜಿ ಶಾಸಕರಾದ ಬೇಳೂರು ಗೋಪಾಲಕೃಷ್ಣ, ಆರ್. ಪ್ರಸನ್ನ ಕುಮಾರ್. ಪಾಲಿಕೆ ಸದಸ್ಯ ಹೆಚ್.ಸಿ. ಯೋಗೀಶ್, ಕವಿತಾ ರಾಘವೇಂದ್ರ, ಶಿವಾನಂದ, ಶಿವಕುಮಾರ್ ಮೊದಲಾದವರಿದ್ದರು.

ವರದಿ ಮಂಜುನಾಥ್ ಶೆಟ್ಟಿ…