ಶಾಸಕರಾದ ಹೆಚ್.ಹಾಲಪ್ಪ ನವರು ಸಾಗರದಲ್ಲಿ ತಾ. ಮಟ್ಟದ ಅಧಿಕಾರಿಗಳ ಸಭೆ ನೆಡೆಸಿ, ಕೋವಿಡ್ ನಿಯಂತ್ರಣದ ಬಗ್ಗೆ ಚರ್ಚಿಸಿ, ಸಾಗರ-ಹೊಸನಗರ ತಾಲ್ಲೂಕಿನಲ್ಲಿ ಅತೀ ಹೆಚ್ಚು ಮಳೆಯಾಗುತ್ತಿರುವುದರಿಂದ ನೆರೆ ಹಾನಿ ಸಂಭವ ಹೆಚ್ಚಿದ್ದು, ಅತಿವೃಷ್ಟಿ ಎದುರಿಸಲು ತಾಲ್ಲೂಕು ಆಡಳಿತ ಸನ್ನದವಾಗುವಂತೆ ಸೂಚಿಸಿ,ಅಧಿಕಾರಿಗಳು ಮಳೆಗಾಲ ಮುಗಿಯುವವರೆಗೂ ರಜೆ ತೆಗೆದುಕೊಳ್ಳದೆ ಕೇಂದ್ರ ಸ್ಥಾನಗಳಲ್ಲಿದ್ದು ಕರ್ತವ್ಯ ನಿರ್ವಹಿಸುವಂತೆ, ಕೋವಿಡ್ ಸೋಂಕು ಎದುರಿಸುತ್ತಿರುವ ಅಧಿಕಾರಿಗಳು ಫೋನ್ ಸಂಪರ್ಕದಲ್ಲಿದ್ದು ಕರ್ತವ್ಯ ನಿರ್ವಹಿಸುವಂತೆ ಸೂಚಿಸುವಂತೆ ಸೂಚಿಸಿದರು. ಉಪ ವಿಭಾಗಾಧಿಕಾರಿಗಳು, ತಹಶೀಲ್ದಾರರು, ತಾ. ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು, ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು ಉಪಸ್ಥಿತರಿದ್ದರು.

ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ

ಶಿವಮೊಗ್ಗದ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153