ಇಂದು ರಾಜ್ಯ ನಾಗರೀಕರ ರಕ್ಷಣಾ ಸಮಿತಿ ಹಾಗೂ ಕಾರ್ಮಿಕ ಇಲಾಖೆ ಶಿವಮೊಗ್ಗ ಹಾಗೂ ಎಪಿಎಂಸಿ ಹಮಾಲಿ ಕಾರ್ಮಿಕರ ಸಂಘದ ವತಿಯಿಂದ ಶಿವಮೊಗ್ಗ ನಗರದ ಎಪಿಎಂಸಿ ಯಲ್ಲಿ ಅಂತರ ರಾಷ್ಟ್ರೀಯ ಕಾರ್ಮಿಕರ ದಿನಾಚರಣೆಯನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಕಾರ್ಮಿಕರ ಇಲಾಖೆ ವತಿಯಿಂದ ಆಗಮಿಸಿದ ಶ್ರೀ ರಘುನಾಥ್ ರವರು ಕಾರ್ಮಿಕರಿಗೆ ಸಿಗುವ ಸೌಲಭ್ಯಗಳ ಕುರಿತು ಮಾಹಿತಿಯನ್ನು ನೀಡಿದರು ಮತ್ತು ರಾಜ್ಯ ನಾಗರೀಕರ ರಕ್ಷಣಾ ಸಮಿತಿ ವತಿಯಿಂದ ಹಿರಿಯ ಹಮಾಲಿ ಕಾರ್ಮಿಕರಾದ ಮೋಮಿನ್ ಭಾಷಾ ಭೈರಪ್ಪ ಜಲೀಲ್ ರೇಣುಕಾ ಬಾಬು ರವರಿಗೆ ಸನ್ಮಾನವನ್ನು ಮಾಡಲಾಯಿತು.

ಈ ಸಂದರ್ಭದಲ್ಲಿ ರಾಜ್ಯ ನಾಗರೀಕರ ರಕ್ಷಣಾ ಸಮಿತಿಯ ರಾಜ್ಯಾಧ್ಯಕ್ಷರಾದ ಕೆ ಶೇಖರ್ ರಾಜ್ಯ ಮಹಿಳಾ ಅಧ್ಯಕ್ಷೆ ಉಷಾ ಉತ್ತಪ್ಪ ಪ್ರಧಾನ ಕಾರ್ಯದರ್ಶಿ ಆರ್ ರಾಘವೇಂದ್ರ ಸಂಸ್ಥಾಪಕರಾದ ಶ್ರೀ ಶಿವಮೊಗ್ಗ ವಿನೋದ್ ಮತ್ತು ಹಮಾಲಿ ಕಾರ್ಮಿಕರ ಸಂಘದ ಗೌರವಾಧ್ಯಕ್ಷರಾದ ಶಿವಪ್ಪ ಮತ್ತು ಅಧ್ಯಕ್ಷರಾದ ಮಣಿ ಮತ್ತು ರಾಜ್ಯ ನಾಗರೀಕರ ರಕ್ಷಣಾ ಸಮಿತಿಯ ಪದಾಧಿಕಾರಿಗಳಾದ ರಮೇಶ್ ಲಕ್ಷ್ಮೀಕಾಂತ ಶಬರೀಶ್ ಹರೀಶ್ ವೆಂಕಟೇಶ್ ಶ್ರೇಯಸ್ ಕುಬೇರ ಮಲ್ಲೇಶಪ್ಪ ಅಯ್ಯಪ್ಪ ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…