ಶಿವಮೊಗ್ಗ: ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಯುವ ಘಟಕದ ವತಿಯಿಂದ ವಿಶ್ವಗುರು ಬಸವಣ್ಣನವರ ಜಯಂತಿ ಅಂಗವಾಗಿ ಇಂದು ವಿನೋಬನಗರದ ಶಿವಾಲಯದ ಆವರಣದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು. ಶಿಬಿರವನ್ನು ಮಾಜಿ ಜಿ.ಪಂ. ಸದಸ್ಯ ಕೆ.ಇ. ಕಾಂತೇಶ್ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಪ್ರಮುಖರಾದ ಸಿ.ಎಸ್ ಷಡಕ್ಷರಿ ,ಎಸ್.ಎಸ್. ಜ್ಯೋತಿಪ್ರಕಾಶ್, ಎಸ್.ದತ್ತಾತ್ರಿ, ಶಿವಯೋಗಿ, ಉಮಾಶಂಕರ್, ನಿತೀಶ್ ಕುಮಾರ್, ಶಿವಕುಮಾರ್, ಅಭಿಷೇಕ್, ಮಲ್ಲಿಕಾರ್ಜುನ, ಉಮೇಶ್ ಕತ್ತಿ ಮುಂತಾದವರಿದ್ದರು.

ವರದಿ ಮಂಜುನಾಥ್ ಶೆಟ್ಟಿ…