ಶಿವಮೊಗ್ಗ ನಗರದ ಮೆಗ್ಗಾನ್ ಆಸ್ಪತ್ರೆಗೆ ಬರುವ ರೋಗಿಗಳಿಗೆ ಸೂಕ್ತ ವೈದ್ಯರ ಹಾಗೂ ವೈದ್ಯಕೀಯ ಸಿಬ್ಬಂದಿಗಳ ಕೊರತೆಯಿದ್ದು ತುರ್ತು ಚಿಕಿತ್ಸೆಗಳ ಅವಶ್ಯಕತೆ ಇರುವ ರೋಗಿಗಳಿಗೆ ತಕ್ಷಣ ಮತ್ತು ಸಮರ್ಪಕವಾದ ಚಿಕಿತ್ಸೆ ದೊರೆಯುವಲ್ಲಿ ವಿಳಂಬವಾಗುತ್ತಿದ್ದು ಹಾಗೂ ಮೂಲಭೂತ ಸೌಕರ್ಯಗಳ ಕೊರತೆಯೂ ಇದ್ದು ಇದನ್ನು ಕೂಡಲೇ ಸರಿಪಡಿಸುವಂತೆ ಆಗ್ರಹಿಸಿ ಆಸ್ಪತ್ರೆಯ ಮುಖ್ಯ ವೈದ್ಯರನ್ನು ಒತ್ತಾಯಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಎನ್ ಎಸ್ ಯುಐ ಅಧ್ಯಕ್ಷರಾದ ವಿಜಯ್, ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕಿಯಾದ ಯಮುನಾ ರಂಗೇಗೌಡರು ,ಮಹಾನಗರ ಪಾಲಿಕೆಯ ಸದಸ್ಯರಾದ ರಮೇಶ್ ಹೆಗ್ಡೆ ,ಕಾಂಗ್ರೆಸ್ ಮುಖಂಡರಾದ ಅಮರಪಲ್ಲಿ ಸುರೇಶ್, ಗಿರೀಶ್ ಯುವ ಕಾಂಗ್ರೆಸ್ ನ ರಾಜ್ಯ ಪ್ರಧಾನ ಕಾರ್ಯದರ್ಶಿ ಚೇತನ್, ಯುವ ಮುಖಂಡರಾದ ಮಧುಸೂದನ್ ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಾಘವೇಂದ್ರ,ಅಮರ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪೂರ್ಣೇಶ್,ಅಬ್ದುಲ್ ಸತ್ತಾರ್ ,ಮಲವಗೊಪ್ಪ ಶಿವು , Nsui ರವಿ ಕಾಟಿಕೆರೆ ,ವೆಂಕಟೇಶ್ ,ಪ್ರಸನ್ನ ಹಾಗೂ ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…