ಶಿವಮೊಗ್ಗ ನಗರದ ಭಾರತೀ ಕಾಲೋನಿಯಲ್ಲಿ ನಿರ್ಮಾಣವಾಗಿರುವ ನೂತನ ದೇವಸ್ಥಾನ ಉದ್ಘಾಟನೆ, ಶ್ರೀ ಚೌಡೇಶ್ವರಿ ದೇವಿಯ ವಿಗ್ರಹ ಪ್ರತಿಷ್ಠಾಪನೆ ಹಾಗೂ ಗೋಪುರ ಕಳಸ ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ಸಂಸದರಾದ ಬಿ. ವೈ. ರಾಘವೇಂದ್ರ ಅವರು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ದೇವಸ್ಥಾನ ಸಮಿತಿಯ ಕೆ. ಲಕ್ಷ್ಮಣ್ ಬ್ಲೂ ಸ್ಟಾರ್, ಕೆ. ಈ ಕಾಂತೇಶ್, ಜ್ಯೋತಿ ಪ್ರಕಾಶ್, ಮಾಲತೇಶ್, ಶಂಕರ್ ಗನ್ನಿ, ಬಳ್ಳೆಕೆರೆ ಸಂತೋಷ್ ಹಾಗೂ ದೇವಸ್ಥಾನ ಸಮಿತಿಯ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…