ಶಿವಮೊಗ್ಗ ಜಿಲ್ಲೆಯನ್ನು ಡೇಂಗ್ಯೂ ರೋಗ ಮುಕ್ತ ಜಿಲ್ಲೆಯನ್ನಾಗಿ ಘೋಷಿಸುವಲ್ಲಿ ಜಿಲ್ಲೆಯ ನಾಗರೀಕರು ಸಹಕಾರ ನೀಡುವುದರ ಜೊತೆಗೆ ಸಂಕಲ್ಪ ಮಾಡಬೇಕಾದ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಹೇಳಿದರು.

ಅವರು ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರಾಷ್ಟ್ರೀಯ ಡೇಂಗ್ಯೂ ದಿನಾಚರಣೆ ಅಂಗವಾಗಿ ಜಿಲ್ಲಾ ಆರೋಗ್ಯ ಇಲಾಖೆಯ ಕಚೇರಿಯಿಂದ ಏರ್ಪಡಿಸಲಾಗಿದ್ದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದರು. ಸೊಳ್ಳೆಗಳಿಂದ ಡೇಂಗ್ಯೂ ಸೇರಿದಂತೆ ಇತರೆ ಅನೇಕ ಕಾಯಿಲೆಗಳು ಹರಡಬಹುದಾದ ಸಾಧ್ಯತೆ ಇದೆ. ಅವುಗಳ ನಿಯಂತ್ರಣಕ್ಕಾಗಿ ಆರೋಗ್ಯ ಇಲಾಖೆಯೊಂದಿಗೆ ಸಾರ್ವಜನಿಕರೂ ಕೈಜೋಡಿಸುವಂತೆ ಅವರು ಸೂಚಿಸಿದರು.

ಡೇಂಗ್ಯೂ ಗುಣಪಡಿಸಬಹುದಾದ ಕಾಯಿಲೆಯಾಗಿದ್ದರೂ, ಕಾಯಿಲೆ ಬಂದ ನಂತರ ಚಿಕಿತ್ಸೆ ಪಡೆಯುವುದಕ್ಕಿಂತ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮ ವಹಿಸುವುದು ಪ್ರಮುಖವಾಗಿದೆ. ಅದಕ್ಕಾಗಿ ಜನರಲ್ಲಿ ಜಾಗೃತಿ ಮೂಡಿಸುವುದು ಬಹು ಮುಖ್ಯ ಎಂದ ಅವರು, ಸೋಂಕು ಹರಡದಂತೆ ಇರಲು ಸೊಳ್ಳೆಗಳ ನಿಯಂತ್ರಣವೇ ಪರಿಹಾರದ ಪ್ರಥಮ ಕ್ರಿಯೆಯಾಗಿದೆ. ಇದರೊಂದಿಗೆ ಪ್ರತಿಯೊಬ್ಬರೂ ತಮ್ಮ ಮನೆಯ ಸುತ್ತಮುತ್ತಲ ಪರಿಸರ ಸ್ವಚ್ಚವಾಗಿಟ್ಟುಕೊಳ್ಳಬೇಕೆಂದವರು ನುಡಿದರು.

೨೦೧೫ರಲ್ಲಿ ಆರಂಭ ಹಂತದಲ್ಲಿದ್ದ ಡೇಂಗ್ಯೂ ಸೋಂಕು ಪ್ರತಿ ವರ್ಷವೂ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೆ ಇದೆ. ಕಳೆದ ಸಾಲಿನಲ್ಲಿ ೫೦೩ಮಂದಿಗೆ ಹಾಗೂ ಪ್ರಸಕ್ತ ಸಾಲಿನ ಆರಂಭಿಕ ಮಾಹೆಗಳಲ್ಲಿ ೪೬ಮಂದಿ ಸೋಂಕಿತರಾಗಿದ್ದಾರೆ. ಸೋಂಕಿನ ನಿಯಂತ್ರಣಕ್ಕಾಗಿ ಜಿಲ್ಲೆಯ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಲಭ್ಯವಿದೆ. ಈ ಸೋಂಕಿನಿAದ ಈವರೆಗೆ ಯಾವುದೇ ಸಾವು-ನೋವುಗಳ ವರದಿಯಾಗಿಲ್ಲ ಎಂದರು. ಆದಾಗ್ಯೂ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಅವರು ಸಲಹೆ ನೀಡಿದರು.
ಈ ಸಂದರ್ಭದಲ್ಲಿಮ ಉಪಸ್ಥಿತರಿದ್ದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ರಾಜೇಶ್ ಸುರಗೀಹಳ್ಳಿ ಅವರು ಮಾತನಾಡಿ, ಪ್ರಪಂಚದಾದ್ಯAತ ಪ್ರತಿವರ್ಷ ಸುಮಾರು ೪೦ಕೋಟಿ ಡೇಂಗ್ಯೂ ಪ್ರಕರಣಗಳು ವರದಿಯಾಗುತ್ತಿವೆ. ಇವುಗಳಲ್ಲಿ ಶೇ.೮೦ರಷ್ಟು ಪ್ರಕರಣಗಳಲ್ಲಿ ಸೋಂಕಿತ ವ್ಯಕ್ತಿಯಲ್ಲಿ ಯಾವುದೇ ಗುಣಲಕ್ಷಣಗಳು ಗೋಚರಿಸದಿರುವುದು ಸವಾಲಾಗಿ ಪರಿಣಮಿಸಿದೆ ಎಂದರು.

ಸಾರ್ವಜನಿಕರು ಮುಂಜಾಗ್ರತಾ ಕ್ರಮವಾಗಿ ಮನೆಯ ಎಲ್ಲಾ ನೀರಿನ ತೊಟ್ಟಿಗಳನ್ನು, ಡ್ರಮ್, ಬ್ಯಾರೆಲ್, ಏರ್‌ಕೂಲರ್‌ಗಳನ್ನು ವಾರಕ್ಕೊಮ್ಮೆಯಾದರೂ ಖಾಲಿ ಮಾಡಿ ಒಣಗಿಸಿ ಪುನಃ ಭರ್ತಿ ಮಾಡಿಕೊಳ್ಳಬೇಕು. ತ್ಯಾಜ್ಯ ವಸ್ತುಗಳಾದ ಟೈರು, ಎಳನೀರಿನ ಚಿಪ್ಪು, ಒಡೆದ ಬಾಟಲಿ, ಮುಂತಾದವುಗಳಲ್ಲಿ ಮಳೆ ನೀರು ಸಂಗ್ರಹವಾಗದAತೆ ಎಚ್ಚರ ವಹಿಸಬೇಕು. ಅಥವಾ ಸೂಕ್ತವಾಗಿ ವಿಲೇವಾರಿ ಮಾಡಬೇಕೆಂದವರು ಸೂಚಿಸಿದರು.
ಸೊಳ್ಳೆ ನಿರೋಧಕಗಳು, ಹಾಗೂ ಸೊಳ್ಳೆ ಪರದೆಯನ್ನು ಬಳಸಿ, ಸೊಳ್ಳೆಗಳು ಕಚ್ಚದಂತೆ ಸ್ವಯಂ ರಕ್ಷಣಾ ವಿಧಾನಗಳನ್ನು ಕೈಗೊಳ್ಳಬೇಕು. ಇಲಾಖೆಯ ಸಿಬ್ಬಂಧಿಗಳು ಲಾರ್ವಾ ಸಮೀಕ್ಷೆಗೆ ಬಂದಲ್ಲಿ ಸಹಕರಿಸಬೇಕು. ಯಾವುದೇ ಜ್ವರ ಕಂಡುಬAದಲ್ಲಿ ತಕ್ಷಣ ತಪಾಸಣೆ ಮಾಡಿಸಿಕೊಂಡು ವೈದ್ಯಕೀಯ ಸಲಹೆ ಪಡೆಯುವುದು ಸೂಕ್ತವಾಗಿದೆ ಎಂದರು.

ರಾಷ್ಟ್ರೀಯ ಡೇಂಗ್ಯೂ ದಿನಾಚರಣೆ ಅಂಗವಾಗಿ ಏರ್ಪಡಿಸಲಾಗಿದ್ದ ಜಾಗೃತಿ ಜಾಥಾವು ಡಿ.ಹೆಚ್.ಒ.ಕಚೇರಿ ಆವರಣದಿಂದ ಆರಂಭಗೊAಡು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಅಂತಿಮವಾಗಿ ಭಾರತೀಯ ಮೆಡಿಕಲ್ ಅಸೋಸಿಯೇಶ್‌ನಲ್ಲಿ ಸಂಪನ್ನಗೊAಡಿತು.
ಕಾರ್ಯಕ್ರಮದಲ್ಲಿ ಡಾ|| ಗುಡದಪ್ಪ ಕುಸಬಿ, ಡಾ|| ಚಂದ್ರಶೇಖರ ಜಿ.ಬಿ., ಶ್ರೀಮತಿ ಪ್ರತಿಮಾ ಡಾಕಪ್ಪ, ಡಾ|| ದಿನೇಶ್, ವಿಜಯಕುಮಾರ್ ಸೇರಿದಂತೆ ಸುಬ್ಬಯ ನರ್ಸಿಂಗ್ ಕಾಲೇಜಿನ ಪ್ರಾಧ್ಯಾಪಕರು, ಪ್ರಶಿಕ್ಷಣಾರ್ಥಿಗಳು, ಆರೋಗ್ಯ ಇಲಾಖೆಯ ಅಧಿಕಾರಿ-ಸಿಬ್ಬಂಧಿ ವರ್ಗದವರು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…