ಹೊಸನಗರ ನ್ಯೂಸ್…

ಕೆಲವು ವರ್ಷಗಳ ಹಿಂದೆ ಸ್ಥಾಪಿತವಾಗಿ ಉತ್ತಮ ರೀತಿಯಲ್ಲಿ ರೈತರಿಗೆ ಸೇವೆ ಸಲ್ಲಿಸುತ್ತಿರುವ ಕೃಷಿ ಉತ್ಪನ ಮರುಕಟ್ಟೆಯನ್ನು ಸಾಗರದ ಕೃಷಿ ಉತ್ಪನ್ನ ಮಾರುಕಟ್ಟೆಯೊಂದಿಗೆ ವಿಲಿನಗೊಳಿಸುವ ರೂಪುರೇಷ ನಡೆದಿದೆ.ಅಲ್ಲದೇ ರಾಣಿಬಿನ್ನೂರು ನಿಂದ ಬೈಂದೂರು ರಾಷ್ಟ್ರೀಯ ಹೆದ್ದಾರಿಯನ್ನು ಹೊಸನಗರ ಟೌನ್ ಬಿಟ್ಟು ಮಾವಿನಕೊಪ್ಪ ದಿಂದ ಬೈಪಾಸ್ ರಸ್ತೆ ನಿರ್ಮಿಸಲು ಉದ್ದೇಶಿಸಿರುವ ಕ್ರಮವನ್ನು ಖಂಡಿಸಿ ಇಂದು ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಪ್ರತಿಭಟನೆಯಲ್ಲಿ ಹಿರಿಯರು ಹಾಗೂ ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪನವರು,ಮಾಜಿ ಶಾಸಕರು,ಕೆಪಿಸಿಸಿ ವಕ್ತಾರರಾದ ಬೇಳೂರು ಗೋಪಾಲಕೃಷ್ಣರವರು,ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಿ ಜಿ ನಾಗರಾಜ್,ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾದ ಕಲಗೋಡು ರತ್ನಾಕರ್, ಡಾ. ರಾಜನಂದಿನಿ ಹಾಗೂ ಸ್ಥಳೀಯ ಮುಖಂಡರುಗಳು ಹಾಗೂ ಚುನಾಯಿತ ಪ್ರತಿನಿಧಿಗಳು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…