ಶಿವಮೊಗ್ಗ: ಈ ಬಾರಿಯ ಯು.ಪಿ.ಎಸ್.ಸಿ. ಪರೀಕ್ಷೆಯಲ್ಲಿ 641 ನೇ ಸ್ಥಾನ ಪಡೆದಿರುವ ಡಾ. ಪ್ರಶಾಂತ್ ಕುಮಾರ್ ಅವರನ್ನು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಕೆ.ಎಸ್. ಈಶ್ವರಪ್ಪ ಅಭಿನಂದಿಸಿದರು. ಪ್ರಶಾಂತ್ ನಿವಾಸಕ್ಕೆ ಭೇಟಿ ನೀಡಿದ ಅವರು ಸಿಹಿ ತಿನ್ನಿಸಿ ಶುಭ ಹಾರೈಸಿ ಸನ್ಮಾನಿಸಿದರು.

ನಿಮ್ಮ ಈ ಯಶಸ್ಸು ರಾಜ್ಯಕ್ಕೆ ಕೀರ್ತಿ ತಂದಿದ್ದು ಮುಂದಿನ ದಿನಗಳಲ್ಲಿ ಇಡೀ ದೇಶಕ್ಕೆ ನಿಮ್ಮ ಸೇವೆ ಸಲ್ಲುವಂತಾಗಲಿ ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯ ಇ. ವಿಶ್ವಾಸ್, ಬಿಜೆಪಿ ನಗರಾಧ್ಯಕ್ಷ ಜಗದೀಶ್ ಹಾಗೂ ಪ್ರಶಾಂತ್ ಕುಟುಂಬದವರು ಇದ್ದರು.

ವರದಿ ಮಂಜುನಾಥ್ ಶೆಟ್ಟಿ…