ಎನ್ ಎಸ್ ಯು ಐ ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್ ಹಾಗೂ 20 ಹೆಚ್ಚು ಕಾರ್ಯಕರ್ತರನ್ನು ಬಿಡುಗಡೆಗೆ ಆಗ್ರಹಿಸಿ ಇಂದು ಮಹಾವೀರ ಸರ್ಕಲ್ನಲ್ಲಿ ಬೃಹತ್ ಸಂಖ್ಯೆಯಲ್ಲಿ ಎನ್ ಎಸ್ ಯು ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ಪಠ್ಯಪುಸ್ತವನ್ನು ಕೇಸರೀಕರಣಗೊಳಿಸುತ್ತಾ ವಿದ್ಯಾರ್ಥಿಗಳಲ್ಲಿ ಕೋಮು ದ್ವೇಷ ಭಾವನೆ ಬಿತ್ತುತ್ತಿದೆ. ಅದಕ್ಕಾಗಿ ರೋಹಿತ್ ಚಕ್ರತೀರ್ಥ ಅವರಂತಹ ಅನರ್ಹರನ್ನು ಪಠ್ಯಪುಸ್ತಕ ರಚನಾ ಸಮಿತಿಯ ಅಧ್ಯಕ್ಷರನ್ನಾಗಿ ಮಾಡಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ.

ರಾಷ್ಟ್ರಕವಿ, ಯುಗದ ಕವಿ ಎಂದು ಹೆಸರಾಗಿರುವ ಕುವೆಂಪು ಅವರಂತಹ ಮಹಾನ್ ವ್ಯಕ್ತಿಗಳ ಕೊಡುಗೆಯಾದ ನಾಡಗೀತೆಗೆ ಅವಮಾನ ಮಾಡುವಂತಹ ರಾಷ್ಟ್ರದ್ರೋಹಿ, ಸಂಘ ಪರಿವಾರದ ಹಿನ್ನೆಲೆಯ ವ್ಯಕ್ತಿ ರೋಹಿತ್ ಚಕ್ರತೀರ್ಥನನ್ನು ಪಠ್ಯಪುಸ್ತಕ ಸಮಿತಿಯ ಅಧ್ಯಕ್ಷನನ್ನಾಗಿ ನೇಮಕ ಮಾಡಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯವಾಗಿದೆ. ಇಂತಹ ವ್ಯಕ್ತಿಯನ್ನು ಸಮಿತಿಯ ಅಧ್ಯಕ್ಷನನ್ನಾಗಿ ನೇಮಕ ಮಾಡಿ ಅವನಿಂದ ಪಠ್ಯಪುಸ್ತಕ ರಚನೆ ಮಾಡಿ ವಿದ್ಯಾರ್ಥಿಗಳ ದಿಕ್ಕುತಪ್ಪಿಸುತ್ತಿರುವ ಶಿಕ್ಷಣ ಸಚಿವರನ್ನು ಸಂಪುಟದಿಂದ ವಜಾಗೊಳಿಸಬೇಕು. ರೋಹಿತ್ ಚಕ್ರತೀರ್ಥನನ್ನು ಅಮಾನತುಗೊಳಿಸಿ ಕೇಸು ದಾಖಲಿಸಬೇಕು.

ಪಠ್ಯಪುಸ್ತಕ ಕೇಸರೀಕರಣಗೊಳಿಸುತ್ತಿರುವ ಕ್ರಮ ಖಂಡಿಸಿ ಶಿಕ್ಷಣ ಸಚಿವರ ಮನೆ ಮುಂದೆ ಪ್ರತಿಭಟನೆ ನಡಸುತ್ತಿದ್ದ ಎನ್.ಎಸ್.ಯು.ಐ. ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್ ಸೇರಿ 20 ಜನ ಕಾರ್ಯಕರ್ತರ ಮೇಲೆ ಸುಳ್ಳು ಮೊಕದ್ದಮೆ ದಾಖಲಿಸಿ ಜೈಲಿಗಟ್ಟುವ ಮೂಲಕ ರಾಜ್ಯ ಸರ್ಕಾರ ಅಧಿಕಾರದ ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ಇದನ್ನು ತೀವ್ರವಾಗಿ ಖಂಡಿಸುತ್ತಿದ್ದೇವೆ.
ಕೂಡಲೇ ಎನ್.ಎಸ್.ಯು.ಐ. ಕಾರ್ಯಕರ್ತರ ಮೇಲೆ ದಾಖಲಿಸಿರುವ ಸುಳ್ಳು ಮೊಕದ್ದಮೆಯನ್ನು ವಜಾಗೊಳಿಸಿ, ಬಿಡುಗಡೆಗೊಳಿಸಬೇಕು. ಇಲ್ಲವಾದಲ್ಲಿ ಎನ್.ಎಸ್.ಯು.ಐ. ರಾಜ್ಯದಾದ್ಯಂತ ಹೋರಾಟವನ್ನು ತೀವ್ರಗೊಳಿಸುವುದಾಗಿ ಈ ಮೂಲಕ ಎಚ್ಚರಿಸುತ್ತಿದ್ದೇವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಎನ್ ಎಸ್ ಯುಐ ಜಿಲ್ಲಾಧ್ಯಕ್ಷ ವಿಜಯ್ , ಗ್ರಾಮಾಂತರ ಅಧ್ಯಕ್ಷ ಹರ್ಷಿತ್ ಗೌಡ ,ನಗರ ಅಧ್ಯಕ್ಷ ಚರಣ್ , ರವಿ ಕಾಟಿಕೆರೆ, ಚಂದ್ರೋಜಿ ರಾವ್, ರವಿ,ಪ್ರದೀಪ್, ತೋಫಿಕ್, ಸೂರಜ್, ಕಿರಣ್,ಪ್ರಮೋದ್, ಸಮರ್ಥ್ ,ಆಕಾಶ್ ,ಉಲ್ಲಾಸ್ ,
ನಾಗೇಂದ್ರ ಆಟೋ ,ಕಾಂಗ್ರೆಸ್ ಮುಖಂಡರಾದ GD ಮಂಜುನಾಥ, ಅಲ್ಪಸಂಖ್ಯಾತ ಕಾಂಗ್ರೆಸ್ ನ ನಗರ ಅಧ್ಯಕ್ಷರಾದ ಮಹಮ್ಮದ್ ನಿಹಾಲ್, ಯುವ ಕಾಂಗ್ರೆಸ್ ನ ರಾಜ್ಯ ಪ್ರಧಾನ ಕಾರ್ಯದರ್ಶಿ ಚೇತನ್, ಯುವ ಮುಖಂಡ ಮಧುಸೂದನ್,ಯುವ ಕಾಂಗ್ರೆಸ್ ನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಸತ್ತಾರ್ ,ಮಲವಗೊಪ್ಪ ಶಿವು ,ಗಿರೀಶ್ ಹಾಗೂ ಮುಂತಾದವರು ಪಾಲ್ಗೊಂಡಿದ್ದರು.

ವರದಿ ಮಂಜುನಾಥ್ ಶೆಟ್ಟಿ…