ಭದ್ರಾವತಿ: ಇಲ್ಲಿನ ವಿ.ಎಸ್.ಐ.ಎಲ್ ಕ್ರೀಡಾಂಗಣದಲ್ಲಿ ಇಂದು ಮತ್ತು ನಾಳೆ ಹಮ್ಮಿಕೊಂಡಿರುವ ‘ಕಂದಾಯೋತ್ಸವ – 2022’ರ ಅಂಗವಾಗಿ ಇಂದು ಎಲ್ಲ 7 ತಾಲ್ಲೂಕಿನ ಕಂದಾಯ ಇಲಾಖೆ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಕ್ರೀಡಾಕೂಟ ನಡೆಯಿತು.

ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿಯವರು ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಅಪರ ಜಿಲ್ಲಾಧಿಕಾರಿ ಡಾ. ನಾಗೇಂದ್ರ ಹೊನ್ನಳ್ಳಿ, ಉಪವಿಭಾಗಾಧಿಕಾರಿ ಪ್ರಕಾಶ್ ಹಾಗೂ 7 ತಾಲ್ಲೂಕಿನ ತಹಸೀಲ್ದಾರ್‍ಗಳು ಸೇರಿದಂತೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.

ವರದಿ ಮಂಜುನಾಥ್ ಶೆಟ್ಟಿ…