ಶಿವಮೊಗ್ಗ ಜೂ.21: ಭದ್ರಾವತಿ ತಾಲ್ಲೂಕ್ ಗ್ರಾಮಾಂತರ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ ಎಂ.ರಮೇಶ್ ಶಂಕರಘಟ್ಟ ಇವರನ್ನು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ವಕ್ತಾರನ್ನಾಗಿ ನೇಮಿಸಲಾಗಿದೆ.

ಇಂದು ಈ ನೇಮಕಾತಿ ಆದೇಶವನ್ನು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಹೆಚ್.ಎಸ್. ಸುಂದರೇಶ್ ಇವರು ಹೊರಡಿಸಿದ್ದಾರೆಂದು ಪಕ್ಷದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎಂ.ರಮೇಶ್ ರವರು ರಾಜ್ಯಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದು, ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಡಿಪ್ಲಮೋ ಪದವಿಯನ್ನು ಪಡೆದಿದ್ದು, ಪತ್ರಿಕೋದ್ಯಮ ಕ್ಷೇತ್ರದಲ್ಲಿ ಅಪಾರವಾದ ಅನುಭವ ಹೊಂದಿದ್ದಾರೆ.

ಭದ್ರಾವತಿಯ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾಗಿ ಸಮಾಜದಲ್ಲಿರುವ ಅತೀ ಸೂಕ್ಷ್ಮ ಜಾತಿ/ವರ್ಗಗಳನ್ನು ಗುರುತಿಸಿ ಪದಾಧಿಕಾರಿಗಳ ನೇಮಕಾತಿಯನ್ನು ಮಾಡಿರುವುದನ್ನು ಕಾಂಗ್ರೆಸ್ ವಲಯದಲ್ಲಿ ಪ್ರಶಂಸಗೆ ಪಾತ್ರವಾಗಿದೆ. ಅಲ್ಲದೇ ಇತ್ತೀಚಿನ ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ ನೋಂದಣಿಯಲ್ಲಿ ಸಕ್ರೀಯವಾಗಿ ಭಾಗವಹಿಸಿರುವುದನ್ನು ಏಐಸಿಸಿ ಕೂಡ ಪ್ರಶಂಸಸಿದೆ. ಇವರ ಕಾಂಗ್ರೆಸ್ ಪಕ್ಷದ ಚಟುವಟಿಕೆಗಳಲ್ಲಿ ಸಕ್ರೀಯರಾಗಿರುವುದನ್ನು ಪರಿಗಣಿಸಿ ಜಿಲ್ಲಾ ಅಧ್ಯಕ್ಷರು ಇವರನ್ನು ಜಿಲ್ಲಾ ವಕ್ತಾರರನ್ನಾಗಿ ನೇಮಿಸಿದ್ದಾರೆ.

ವರದಿ ಮಂಜುನಾಥ್ ಶೆಟ್ಟಿ…