ಅಗ್ನಿಪಥ ಯೋಜನೆ ಹಿಂಪಡೆಯಲು ಒತ್ತಾಯಿಸಿ ಹಾಗೂ ಇ ಡಿ ಮೂಲಕ ದ್ವೇಷ ರಾಜಕಾರಣ ಮಾಡುತ್ತಿರುವ ಭ್ರಷ್ಟ ಬಿಜೆಪಿ ಸರ್ಕಾರದ ವಿರುದ್ಧ ಜೂ.24 ರಂದು ಶುಕ್ರವಾರ ನಾಳೆ ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ರೇಸ್‌ ಕೋರ್ಸ್ ರಸ್ತೆಯಲ್ಲಿರುವ ಕರ್ನಾಟಕ ಪ್ರದೇಶ ಯುವ ಭವನದಿಂದ ಸಮಿತಿ ವತಿಯಿಂದ ಯುವ ಆಕ್ರೋಶ ಪ್ರತಿಭಟನಾ ಮೆರವಣಿಗೆ ಹಾಗೂ ರಾಜ್ ಭವನ್ ಚಲೋ ನಡೆಯಲಿದೆ.

ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಮೊಹಮ್ಮದ ಹ್ಯಾರೀಸ್ ನಲಪಾಡ ನೇತೃತ್ವದಲ್ಲಿ ಯುವಕರು ರಾಜಭವನವರೆಗೆ ರಾಲಿ ನಡೆಸಲಿದ್ದಾರೆ.

ಬೆಂಗಳೂರಿನಲ್ಲಿರುವ ಈ ಬೃಹತ್ ಪ್ರತಿಭಟನಾ ರಾಜಮಹಲ್ ಚಲೋಗೆ ಶಿವಮೊಗ್ಗ ಜಿಲ್ಲೆಯ ಎಲ್ಲ ಯುವ ಕಾಂಗ್ರೆಸ್ ನ ಪದಾಧಿಕಾರಿಗಳು ಕಾರ್ಯಕರ್ತ ಬಂಧುಗಳು ಹಾಗೂ ಜಿಲ್ಲೆಯ ಯುವಕ ಮಿತ್ರರು ಅತಿಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಭ್ರಷ್ಟ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟಿಸೋಣ ಎಂದು ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನ ಜಿಲ್ಲಾಧ್ಯಕ್ಷ ಹೆಚ್.ಪಿ. ಗಿರೀಶ್ ಕೋರಿದ್ದಾರೆ.

ವರದಿ ಮಂಜುನಾಥ್ ಶೆಟ್ಟಿ…