ಶಿಕಾರಿಪುರ ನ್ಯೂಸ್…

ಮಾಸೂರಿನಲ್ಲಿ ಕೌರವ ಶಿಕ್ಷಣ ಸಂಸ್ಥೆ ವತಿಯಿಂದ ನೂತನವಾಗಿ ನಿರ್ಮಿಸಿರುವ ಜಗಜ್ಯೋತಿ ಸಾಂಸ್ಕೃತಿಕ ಕೇಂದ್ರ ಉದ್ಘಾಟನಾ ಸಮಾರಂಭದಲ್ಲಿ ಸಂಸದರಾದ ಬಿ. ವೈ ರಾಘವೇಂದ್ರ ಅವರು ಭಾಗವಹಿಸಿ ಮಾತನಾಡಿದರು.

ಕೃಷಿ ಸಚಿವರು, ಕೌರವ ಸಂಸ್ಥೆಯ ಗೌರವ ಅಧ್ಯಕ್ಷರಾದ
ಬಿ. ಸಿ ಪಾಟೀಲ ನಿರ್ಮಿಸಿರುವ ಜಗಜ್ಯೋತಿ ಸಾಂಸ್ಕೃತಿಕ ಕೇಂದ್ರವು ಮಾದರಿ ಕೇಂದ್ರವಾಗಿ ಮುಂದಿನ ದಿನದಲ್ಲಿ ಕಾರ್ಯವನ್ನು ನೆಡಸಲಿ ಎಂದು ತಿಳಿಸಲಾಯಿತು.

ದಿವ್ಯ ಸಾನಿಧ್ಯವನ್ನು ಡಾ।। ಶ್ರೀ ಶ್ರೀ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಸಾಣೇಹಳ್ಳಿ,
ಶ್ರೀ ಮ.ನಿ.ಪ್ರ. ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಸಂಸ್ಥಾನ ಗವಿಮಠ, ಶ್ರೀ ಬಸವಮೂರ್ತಿ ಮಾದರ ಚನ್ನಯ್ಯ ಮಹಾಸ್ವಾಮಿಗಳು ಶ್ರೀ ವಿರೂಪಾಕ್ಷ ಮಹಾಸ್ವಾಮಿಗಳು
ಶಿವಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು, ಶಾಸಕರು ಇನ್ನಿತರ ಮುಖಂಡರು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…